ಮೈಸೂರು : ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 8.30 ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿರುವ ಅವರು ತಾಯಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಡಿಕೇರಿ ಪ್ರವಾಸ ಮಾಡಿ, ಸಂಜೆ ಮತ್ತೆ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್ ಮತ್ತು ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮುಂದಿನ ಚುನಾವಣೆ ಎದುರಿಸಲು ರೂಪುರೇಷೆಗಳನ್ನು ತಯಾರಿಸಿ ಚರ್ಚೆ ಮಾಡಲಿದ್ದಾರೆ.