ಕೊಡಗು : ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಕೊಡಗು ಜಿಲ್ಲೆಗೆ ಭೇಟಿ ನೀಡಿ ಅಬ್ಬರದ ಮತ ಪ್ರಚಾರ ಮಾಡಿದ್ದಾರೆ. ಪ್ರಚಾರಕ್ಕೂ ಮೊದಲು ಭಾಗಮಂಡಲದ ಭಂಗಡೇಶ್ವರ ಮತ್ತು ತಲಕಾವೇರಿಯ ಮಾತೆಗೆ ಪೂಜೆ ಸಲ್ಲಿಸಿದರು. ಇನ್ನು ಕೊಡಗು ಗಡಿಭಾಗ ಆನೆ ಚೌಕುರು ಗೇಟ್ ಬಳಿ ಎಂ.ಲಕ್ಷ್ಮಣ್ ಅವರಿಗೆ ಕಾರ್ಯಕರ್ತರು ಆದ್ದೂರಿ ಸ್ವಾಗತ ಕೋರಿದರು. ಈ ವೇಳೆ ಕ್ಷೇತ್ರದ ಶಾಸಕ ಪೊನ್ನಣ್ಣ , ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ . ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಭಾಗಿಯಾಗಿದ್ರು.