ಮಂಡ್ಯ : ಸ್ಮಶಾನ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಕಾರಣ ಅಂತ್ಯಕ್ರಿಯೆ ಮಾಡಲು ಜಾಗವಿಲ್ಲದೆ ಬಡ ಕುಟುಂಬವೊಂದು ಪರದಾಡಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಡ ಕುಟುಂಬದ ವ್ಯಕ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ರು. ಗ್ರಾಮದಲ್ಲಿದ್ದ 2 ಎಕರೆ ಸಾರ್ವಜನಿಕ ಸ್ಮಶಾನ ಜಾಗವನ್ನ ಪ್ರಭಾವಿ ವ್ಯಕ್ತಿಯೋರ್ವ ಒತ್ತುವರಿ ಮಾಡಿಕೊಂದ್ದರಿಂದ ಅಂತ್ಯಕ್ರಿಯೆಗೆ ಜಾಗವಿಲ್ಲದೆ ಕುಟುಂಬಸ್ಥರು ಪರದಾಡಿದರು. ಕಡೆಗೆ ತಾಲೂಕು ಆಡಳಿತಕ್ಕೆ ಗ್ರಾಮಸ್ಥರು ದೂರು ನೀಡಿದರು. ಇನ್ನು ಸ್ಥಳಕ್ಕೆ ಬಂದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಗ್ರಾಮದ ಸ್ಮಶಾನ ಜಾಗವನ್ನು ಒತ್ತುವರಿದಾರರಿಂದ ಬಿಡಿಸಿಕೊಡುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಕಡೆಗೆ ಅಧಿಕಾರಿಗಳು ಪೊಲೀಸರ ಭದ್ರತೆ ಪಡೆದು ಒತ್ತುವರಿಯಾಗಿರೋ ಸ್ಮಶಾನ ಜಾಗದಲ್ಲಿಯೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ಮಾಡಲು ಅವಕಾಶ ಮಾಡಿಸಿಕೊಟ್ಟರು.