ಬೆಳಗಾವಿ : ಮಂಡ್ಯ ಕ್ಷೇತ್ರದಿಂದ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿರುವುದರಿಂದ ಸುಮಲತಾ ಅವರೊಂದಿಗೆ ದೆಹಲಿ ವರಿಷ್ಠರು ಮಾತಾಡಲಿದ್ದಾರೆ, ಅವರಿಗೆ ಸೂಕ್ತ ಸ್ಥಾನಮಾನ ಖಂಡಿತವಾಗಿಯೂ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ನಾನು ಸುಮಲತಾ ಅವರ ಜೊತೆಗೆ ಮಾತನಾಡಿಲ್ಲ. ರಾಷ್ಟ್ರೀಯ ನಾಯಕರೇ ಸುಮಲತಾರ ಜೊತೆ ಮಾತಾಡಲಿದ್ದಾರೆ ಎಂದರು. ಇನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ನಿಧಿ ಇದುವರೆಗೆ ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿಷಯದ ಬಗ್ಗೆ ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ ನಾನೇನು ಹೇಳಲ್ಲ ಎಂದರು.