ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿ ಚಲಪತಿ ಅಭಿಪ್ರಾಯ
ಕೋಲಾರ: ಈ ಬಾರಿಯ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿ ಚಲಪತಿ ತಿಳಿಸಿದರು.
ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿ, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸಂಸದರನ್ನು ಆಯ್ಕೆ ಮಾಡಲಾಗಿದೆ. ಆದರೆ ಈ ಬಾರಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪಕ್ಷದಿಂದ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದ್ದು, ಯಾರೇ ಅಭ್ಯರ್ಥಿ ಮೈತ್ರಿ ಧರ್ಮವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಾಲಿಸಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದಿಂದ 400 ಸೀಟುಗಳು ಗುರಿಯನ್ನು ಹೊಂದಿದ್ದು, ಅದರಲ್ಲಿ ಕೋಲಾರ ಕ್ಷೇತ್ರವು ಒಂದಾಗಿದ್ದರೆ ಅಂದುಕೊಂಡಲ್ಲಿ ಮೈತ್ರಿಕೂಟದಿಂದ ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ಕಾರ್ಯಕರ್ತರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರು.
ಸಚಿವ ಶಿವರಾಜ್ ತಂಗಡಿಗಿ ಮೋದಿ ಅವರ ಹೆಸರು ಹೇಳಿ ಬಂದವರ ಕಪಾಳಕ್ಕೆ ಹೊಡಿರಿ ಅಂತ ಮಾತಾಡಿದ್ದಾರೆ ತಾಕತ್ತಿದ್ದರೆ ಬಿಜೆಪಿಯ ಹಾಗೂ ಹಿಂದುತ್ವದ ಒಬ್ಬ ಕಾರ್ಯಕರ್ತರನ್ನು ಮುಟ್ಟಿ ನೋಡಲಿ ಎಂದು ಸವಾಲು ಹಾಕಿದರು.