ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡುವ ಕೆಯುಡಬ್ಲ್ಯೂಜೆ (KUWJ) ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಪಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ. ಚಿತ್ರದುರ್ಗದಲ್ಲಿ ಏಪ್ರಿಲ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.
- ಪಿ.ಆರ್.ರಾಮಯ್ಯ ಪ್ರಶಸ್ತಿ: ಸಿ.ಕೆ.ಮಹೇಂದ್ರ, ಮೈಸೂರು
- ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ: ಬಿ.ಎಂ.ಬಶೀರ್, ಮಂಗಳೂರು.
- ಗೊಮ್ಮಟ ಮಾಧ್ಯಮ ಪ್ರಶಸ್ತಿ: ಕುಂತಿನಾಥ ಶ್ರೀ ಕಲಮನಿ, ಬೆಳಗಾವಿ
- ಡಿವಿಜಿ ಪ್ರಶಸ್ತಿ: ವಿ.ವೆಂಕಟೇಶ್, ಬೆಂಗಳೂರು
- ಸಿ.ಆರ್.ಕೃಷ್ಣರಾವ್(ಸಿಆರ್ಕೆ) ಪ್ರಶಸ್ತಿ: ಸಿ.ಜಿ.ಮಂಜುಳ, ಬೆಂಗಳೂರು
- ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ಮಲ್ಲಿಗೆ ಮಾಚಮ್ಮ, ಮೈಸೂರು.
- ಎಸ್.ವಿ.ಜಯಶೀಲರಾವ್ ಪ್ರಶಸ್ತಿ: ಮೋಹನ ಹೆಗಡೆ, ಹುಬ್ಬಳ್ಳಿ
- ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ: ಸನತ್ ಕುಮಾರ್ ಬೆಳಗಲಿ
- ಕಿಡಿ ಶೇಷಪ್ಪ ಪ್ರಶಸ್ತಿ: ಬಿ.ಎಂ.ನಂದೀಶ್, ಹಾಸನ.
- ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ: ಆರ್.ಜಯಕುಮಾರ್, ಬೆಂಗಳೂರು.
- ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ: ಅಶೋಕ್ ರಾಮ್, ರಾಮನಗರ.
- ರಾಜಶೇಖರಕೋಟಿ ಪ್ರಶಸ್ತಿ: ಶಶಿಕುಮಾರ್ ಬಿ ಕೆರೂರ, ಬಾಗಲಕೋಟೆ
- ಪಿ.ರಾಮಯ್ಯ ಪ್ರಶಸ್ತಿ: ಮನೋಹರ ಮಲ್ಲಾಡದ, ರಾಣೆಬೆನ್ನೂರು
- ಮ.ರಾಮಮೂರ್ತಿ ಪ್ರಶಸ್ತಿ: ಎಚ್.ಕೆ.ಬಸವರಾಜು, ಬೆಂಗಳೂರು.
- ಗರುಡನಗಿರಿ ನಾಗರಾಜ್ ಪ್ರಶಸ್ತಿ: ಪ್ರಭುದೇವ ಶಾಸ್ತ್ರಿಮಠ, ಬೆಂಗಳೂರು
- ಮಹದೇವ ಪ್ರಕಾಶ್ ಪ್ರಶಸ್ತಿ: ವಿಜಯಕುಮಾರ್ ವಾರದ, ಕಲಬುರಗಿ
- ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿ: ಎನ್.ಬಾಬು, ಭದ್ರಾವತಿ.
- ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿ: ನಾಮದೇವ ವಾಟ್ಕರ್, ಯಾದಗಿರಿ
- ಎಂ.ನಾಗೇಂದ್ರರಾವ್ ಪ್ರಶಸ್ತಿ: ರವಿ ಆರ್, ದಾವಣಗೆರೆ
- ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ: ಕೆ.ಗೋಪಿಕಾ ಮಲ್ಲೇಶ್, ಕೋಲಾರ.
- ಗುರುಲಿಂಗಸ್ವಾಮಿ ಹೊಳಿಮಠ ಪ್ರಶಸ್ತಿ: ಆರ್.ಸಿ.ಪುಟ್ಟರಾಜು, ಚಾಮರಾಜನಗರ