ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಎಸ್ ಎಲ್ ಭೈರಪ್ಪನವರ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಭೇಟಿ ನೀಡಿದ್ದು, ಭೈರಪ್ಪನವರಿಗೆ ಹಾರ ಹಾಕಿ, ಶಾಲು ಹೊದಿಸಿ ಒಡೆಯರ್ ಸನ್ಮಾನಿಸಿದ್ದಾರೆ. ಯದುವೀರ್ ಗೆ ಸ್ಥಳೀಯ ಶಾಸಕ ಶ್ರೀವತ್ಸ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಾಥ್ ನೀಡಿದ್ದು, ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನಲೆಯಲ್ಲಿ ಯದುವೀರ್ ಒಡೆಯರ್ ವಿವಿಧ ಧರ್ಮಗುರುಗಳು, ಹಿರಿಯ ಸಾಹಿತಿಗಳು, ಬುದ್ದಿ ಜೀವಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ.