ಏ.4 ರಂದು ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಬ್ರಹ್ಮರಥೋತ್ಸವ
ಪ್ರತಿನಿಧಿ ವರದಿ ಗುಂಡ್ಲುಪೇಟೆ
ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಬ್ರಹ್ಮರಥೋತ್ಸವ ಜರಗುವ ಹಿನ್ನೆಲೆ ರಥೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳನ್ನು ಹೊರತುಪಡಿಸಿ ಉಳಿದ ದ್ವಿಚಕ್ರ, 4 ಚಕ್ರ. ಮಿನಿ ವಾಹನ ಮತ್ತು ಇತರೆ ವಾಹನಗಳನ್ನು ನಿಷೇಧಿಸಲಾಗಿದೆ.
ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತಾದಿಗಳು ಬೆಟ್ಟದ ತಪ್ಪಲಿನ ಆರಣ್ಯ ಇಲಾಖೆಯ ಚೆಕ್ ಪೋಸ್ಟ್ ಮೈದಾನದಲ್ಲಿ ತಮ್ಮವಾಹನಗಳನ್ನು ನಿಲ್ಲಿಸಿ, ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ನಿಗಧಿಪಡಿಸಿರುವ ದರ ಪಾವತಿಸಿ ದೇವರ ದರ್ಶನಕ್ಕೆ ಹೋಗಿ ಬರುವ ವ್ಯವಸ್ಥೆ ಮಾಡಲಾಗಿದೆ.
ಭಕ್ತಾದಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕಾಗಿ ತಾಲೂಕು ತಹಸೀಲ್ದಾರ್ ಹಾಗೂ ಆಡಳಿತಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.