ಪ್ರತಿನಿಧಿ ವರದಿ ಮೈಸೂರು
ಚಾಮುಂಡಿಬೆಟ್ಟದಲ್ಲಿ ಶ್ರೀ ಮಹಾಭಲೇಶ್ವರ ಸ್ವಾಮಿಯ ರಥೋತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ವತಿಯಿಂದ ಭಾನುವಾರ ಬೆಳಗ್ಗಿನಿಂದಲೇ ಮಹಾಭಲೇಶ್ವರ ಸ್ವಾಮಿಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು.
ಬಳಿಕ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಮಹಾಬಲೇಶ್ವರ ಸ್ವಾಮಿಯ ರಥವನ್ನು ಎಳೆಯುವ ಮೂಲಕ ಭಕ್ತಭಾವ ಮೆರೆದರು. ರಥೋತ್ಸವದ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ಹಲವು ಭಕ್ತರು ಪಾಲ್ಗೊಂಡಿದ್ದರು.
=================