ಕೋಲಾರ: ಬಣ ರಾಜಕೀಯಕ್ಕೆ ತೆರೆ ಎಳೆದು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಳ್ಳೋಣ ಎಂದು ಭೈರತಿ ಸುರೇಶ್ ತಿಳಿಸಿದರು.
ತಮ್ಮ ನಿವಾಸದಲ್ಲಿ ಸಭೆ ನಡೆಸಿ, ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸುವ ಮೂಲಕ ಅಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ಪಕ್ಷದ ಅಭ್ಯರ್ಥಿ ಪರ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಸಂದೇಶ ರವಾನೆಯಾಗಬೇಕು ಎಂದು ಸಚಿವ ಭೈರತಿ ಸುರೇಶ್ ಕೋರಿದರು.
ಕ್ಷೇತ್ರ ವ್ಯಾಪ್ತಿಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು,
ಮುಖಂಡರು ಹಾಜರಿರಲು ಸೂಚಿಸಲಾಯಿತು.
ಸಭೆಯಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಗೈರಾಗಿದ್ದುದು ಪಕ್ಷದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಬಿಂಬಿಸುವಂತಿತ್ತು. ಸಚಿವರ ಬೆಂಬಲಿಗರರಾದ ಜಯದೇವ್, ಪ್ರಸಾದ್ಬಾಬು, ಉದಯಶಂಕರ್ ಮತ್ತಿತರರು ಹಾಜರಿದ್ದರಾದರೂ ಪಕ್ಷದಲ್ಲಿ ಭಿನ್ನಮತ ಇನ್ನೂ ಶಮನಗೊಂಡಿಲ್ಲ
ಎಂಬುದನ್ನು ಸಾಕ್ಷೀಕರಿಸಿದಂತಿತ್ತು. ಏಪ್ರಿಲ್ 2 ರಂದು ಕೋಲಾರದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಸಚಿವರಾದ ಡಾ.ಸುಧಾಕರ್, ಶಾಸಕರಾದ ಕೆ.ವೈ.ನಂಜೇಗೌಡ, ಎಸ್.ಎನ್.ನಾರಾಯಣಸ್ವಾಮಿ, ಕೊತ್ತೂರು ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ನಸೀರ್ ಅಹಮದ್, ಅನಿಲ್ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ಬಾಬು, ಉದಯಶಂಕರ್,ಮುಖಂಡರಾದ ಆದಿನಾರಾಯಣ, ಶಿಢ್ಲಘಟ್ಟದ ರಾಜೀವ್ ಗೌಡ, ಕೋಲಾರದ ಸೀಸಂದ್ರ ಗೋಪಾಲಗೌಡ ಮತ್ತಿತರರಿದ್ದರು.