ತುಮಕೂರು : ಇಂದು ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್ ಶ್ರೀಗಳ 117 ನೇ ಜಯಂತಿ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ಸರಳವಾಗಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಮಾಡಲಾಗುತ್ತಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಿವಿಧ ಮಠಾಧೀಶರು ಹಾಗೂ ಭಕ್ತರು ಭಾಗಿಯಾಗಿದ್ದಾರೆ. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಡಾ.ಜಿ.ಪರಮೇಶ್ವರ್ ಗದ್ದುಗೆ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಭಕ್ತಿ ಪೂರ್ವಕವಾಗಿ ನಾನು ನಮನ ಸಲ್ಲಿಸಿದ್ದೇನೆ. ರಾಜ್ಯದ ಎಲ್ಲಾ ಭಾಗದ ಬಂದು ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಲಕ್ಷಾಂತರ ಮಕ್ಕಳು ಜೀವನ ಕಲ್ಪಿಸಿಕೊಂಡಿದ್ದಾರೆ. ಎಲ್ಲಾ ಕೊಡುಗೆಗಳನ್ನು ಗುರುತಿಸಿ ಶ್ರೀಗಳಿಗೆ ಭಾರತರತ್ನ ಕೊಡಬೇಕು. ಆದರೆ ಕೇಂದ್ರ ಸರ್ಕಾರ ಯಾಕೋ ಏನೋ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಡಾ.ಜಿ.ಪರಮೇಶ್ವರ್ ಹೇಳಿದರು.