ಇಂದು ಲಿಂಗೈಕ್ಯ ಶಿವಕುಮಾರಸ್ವಾಮಿಗಳ 117ನೇ ಜಯಂತಿ ಹಿನ್ನೆಲೆ ಬೆಳಗ್ಗೆಯಿಂದ ಗದ್ದುಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ಅಭಿಷೇಕ ಮಾಡಲಾಗಿದ್ದು,. 11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಲಾಗಿದೆ. ನೀತಿ ಸಂಹಿತೆ ಜಾರಿ ಹಿನ್ನೆಲೆ ರಾಜಕಾರಣಿಗಳು, ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿ, ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ವಿಶೇಷವಾಗಿ ಪತಂಜಲಿ ಖ್ಯಾತಿಯ ಬಾಬಾ ರಾಮದೇವ್, ಮುಂಡರಗಿಯ ಅನ್ನದಾನೇಶ್ವರ ಶ್ರೀಗಳು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು, ಗದಗಿನ ವೀರಶೈವ ಪುಣ್ಯಶ್ರಮದ ಕಲ್ಲಯ್ಯ ಅಜ್ಜರವರು ಸೇರಿದಂತೆ ಅನೇಕ ಪೂಜ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ 117ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ ಮಾಡಲಾಗುತ್ತೆ.