ಮೈಸೂರು: ಮೈಸೂರಿನ ಸಾತಗಳ್ಳಿ ಬಸ್ ಡಿಪೋ ಬಳಿಯ ಗುರು ರಾಘವೇಂದ್ರ ಜ್ಯುವೆಲ್ಲರಿ ಶಾಪ್ ನಲ್ಲಿ ಚಿನ್ನಾಭರಣ ದೋಚಿ ಖದೀಮರು ಪರಾರಿಯಾಗಿದ್ದಾರೆ. ಅಂಗಡಿ ಮಾಲೀಕ ನಾಗರಾಜ್ ಕುಟುಂಬ ಮಧುಗಿರಿಗೆ ಜಾತ್ರೆಗೆ ತೆರಳಿದ್ದಾಗ ಕಳ್ಳರು ಕೈಚಳಕ ತೋರಿಸಿದ್ದು,ಸುಮಾರು 2 ಕೆಜಿ 150 ಗ್ರಾಂ ಚಿನ್ನ, 25 ಕೆಜಿ ಬೆಳ್ಳಿಯನ್ನು ದೋಚಿದ್ದಾರೆ. ಅಲ್ಲದೆ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಸಹಿತ ಕಳ್ಳರು ಪರಾರಿಯಾಗಿದ್ದಾರೆ. ಇನ್ನು ಸ್ಥಳಕ್ಕೆ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಹಾಗೂ ಮೈಸೂರು ಗ್ರಾಮಾಂತರ ಆಡಿಷನಲ್ ಎ.ಎಸ್.ಪಿ ನಾಗೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಜಾಲ ಬೇಧಿಸಲು ಪೊಲೀಸರಿಂದ ವಿಶೇಷ ತಂಡ ರಚನೆ ಮಾಡಲಾಗಿದ್ದು, ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.