ಮೈಸೂರು: ಅಭಿವೃದ್ಧಿ ಆಗಿದ್ರೆ ತಾನೇ ಟ್ರೇಲರ್. ಸುಳ್ಳಿನ ಪಿಕ್ಚರ್ ಅವರದ್ದು ಬಾಕಿ ಇರಬಹುದು ಎಂದು ಅಭಿವೃದ್ಧಿ ವಿಚಾರವಾಗಿ ಪಿಎಂ ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಲ್ಲಿವರೆಗೆ ಹೇಳಿರುವುದೆಲ್ಲ ಸುಳ್ಳು.ಅವರು 200 ಕ್ಷೇತ್ರ ಮಾತ್ರ ಗೆಲ್ಲೋದು. ಕಡಿಮೆ ಸ್ಥಾನ ಬರುತ್ತದೆ ಎಂದು ಗೊತ್ತಾದ ಮೇಲೆಯೇ ಹೆಚ್ಚು ಸ್ಥಾನ ಬರುತ್ತೇವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಕೂಡ ಅವರ ತಂತ್ರಗಾರಿಕೆ. ಕರ್ನಾಟಕದಲ್ಲಿ ನನಗೆ ವಿಶ್ವಾಸ ಇದೆ. 18 ರಿಂದ 20 ಸ್ಥಾನ ಗೆಲ್ಲುತ್ತೇವೆ. ಅವರು ಸಹ ಸರ್ವೆ ಮಾಡಿಸಿದ್ದಾರೆ. ಅವರು ಗೆಲ್ಲೋದೆ 200 ಕ್ಷೇತ್ರ ಮಾತ್ರ. ಕರ್ನಾಟಕದಲ್ಲಿ 18 ರಿಂದ 20 ಕ್ಷೇತ್ರ ಗೆದ್ದೆ ಗೆಲ್ಲುತ್ತೇವೆ. ಈ ಬಾರಿ ಬಿಜೆಪಿಯ ಸುಳ್ಳಿಗೆ ಯಾರೂ ಸಹ ಮರಳಾಗುವುದಿಲ್ಲ. ಮೋದಿಯೂ ಬಂದು ಪ್ರಚಾರ ಮಾಡಲಿ. ವಿಧಾನಸಭೆಯಲ್ಲಿ ಮೋದಿ ಪ್ರಚಾರ ಮಾಡಿದ್ರು, ಆಗ ಏನಾಯಿತು ಎಂಬುದು ಗೊತ್ತಿದೆ. ಈಗಲೂ ಮಾಡಲಿ ಬಿಡಿ ಎಂದು ಹೇಳಿದರು.