ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಜ್ಯೋತಿಷಿಗಳ ಸೂಚನೆಯಂತೆ ಜಿಲ್ಲಾಧಿಕಾರಿ ರಾಜೇಂದ್ರರಿಗೆ ಯದುವೀರ್ ನಾಮಪತ್ರ ಸಲ್ಲಿಸಿದರು. ಏ 3 ರಂದು ಬೃಹತ್ ರ್ಯಾಲಿ ಮೂಲಕ ತೆರಳಿ ಮತ್ತೊಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇನ್ನು ಈ ಸಂದರ್ಭ ಯದುವೀರ್ ಅವರಿಗೆ ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ ಶ್ರೀವತ್ಸ ಸಾಥ್ ಕೊಟ್ಟಿದ್ದಾರೆ.