ಪ್ರತಿನಿಧಿ ವರದಿ ಗೋಣಿಕೊಪ್ಪ
ಹಾತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪೊನ್ನಂಪೇಟೆ ತಾಲೂಕು ಸವಿತಾ ಸಮಾಜ ವತಿಯಿಂದ ಸವಿತಾ ಸಮಾಜ ಜನಾಂಗದ ಕ್ರೀಡಾಕೂಟ ಸೋಮವಾರ ಚಾಲನೆ ನೀಡಲಾಯಿತು.
ಪುರುಷರ ಕ್ರಿಕೆಟ್, ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗಜಗ್ಗಾಟ, ಮಕ್ಕಳಿಗೆ ಕ್ರೀಡಾ ಸ್ಪರ್ಧೆಗಳಲ್ಲಿ ಸಮಾಜದ ಸದಸ್ಯರು ಪಾಲ್ಗೊಂಡರು. ಶಾಸಕ ಎ. ಎಸ್. ಪೊನ್ನಣ್ಣ ಉದ್ಘಾಟಿಸಿ ಮಾತನಾಡಿ, ಜನಾಂಗದ ಅಭಿವೃದ್ದಿಗೆ ಕ್ರೀಡೆ ಸಹಕಾರಿಯಾಗಿದ್ದು, ಐನ್ಮನೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಹಾತೂರು ಮೈದಾನ ಅಭಿವೃದ್ದಿಗೆ ಮುಂದಾಗುವುದಾಗಿ ತಿಳಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಯು. ಬೋಪಣ್ಣ, ಗೋಣಿಕೊಪ್ಪ ಗ್ರಾಪಂ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪೊನ್ನಂಪೇಟೆ ಗ್ರಾಪಂ ಅಧ್ಯಕ್ಷ ಅಣ್ಣೀರ ಹರೀಶ್, ಸವಿತಾ ಸಮಾಜ ಜಿಲ್ಲಾಧ್ಯಕ್ಷ ಕೆ.ಎಸ್.ದೊರೇಶ್, ಕಾಂಗ್ರೆಸ್ ಮುಖಂಡ ತೀತಿಮಾಡ ಸದಾ, ಪೊನ್ನಂಪೇಟೆ ತಾಲೂಕು ಸವಿತಾ ಸಮಾಜ ಅಧ್ಯಕ್ಷ ಪೂಣಚ್ಚೀರ ಎಸ್. ಮನೋಜ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ನಾಯಂದರ ಆರ್. ಶಿವಾಜಿ, ಪ್ರಧಾನ ಕಾರ್ಯದರ್ಶಿ ಹರೀಶ್, ಸಲಹೆಗಾರ ಸಿ. ಆರ್. ಬೇಬಿ, ಸವಿತಾ ಸಮಾಜ ಸಲಹೆಗಾರ ಜಿಮ್ಮ ಸುಬ್ಬಯ್ಯ ಇದ್ದರು.
ಗೋಣಿಕೊಪ್ಪದ ಹಾತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಸವಿತಾ ಸಮಾಜ ಕ್ರೀಡಾಕೂಟವನ್ನು ಶಾಸಕ ಎ. ಎಸ್. ಪೊನ್ನಣ್ಣ ಉದ್ಘಾಟಿಸಿದರು.