ಮೈಸೂರು : 60 ಸಾವಿರ ಮತಗಳ ಅಂತರದಲ್ಲಿ ಗೆದ್ದರೆ ನನ್ನನ್ನು ಯಾರು ಮುಟ್ಟುವುದಿಲ್ಲ ಎಂದು ನಿನ್ನೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಟೀಕಿಸಿದ್ದಾರೆ. ;ಸಿಎಂ ಬದಲಾವಣೆಯಾಗುತ್ತೆ ಎಂದು ಹಿಂದೆ ಕಾಂಗ್ರೆಸ್ ನವರೇ ಹೇಳುತ್ತಿದ್ದರು. ಎಂಪಿ ಚುನಾವಣೆಯಲ್ಲಿ ಬಹುಮತ ಬರಲ್ಲ ತಾನೂ ಬದಲಾಗೋದು ಗ್ಯಾರಂಟಿ ಎನ್ನವುದು ಸಿಎಂಗೆ ಗೊತ್ತಾಗಿದೆ. ಸಿಎಂ ಬದಲಾವಣೆಯಾಗುತ್ತೆ ಎಂದು ಸಿದ್ದರಾಮಯ್ಯಗೆ ಗೊತ್ತಾಗಿದೆ ಅನಿಸುತ್ತದೆ ಎಂದು ಜಿಟಿಡಿ ಲೇವಡಿ ಮಾಡಿದರು.