ಮೈಸೂರು : ನಮ್ಮ ಸಮಾಜದ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿ ಯದುವೀರ್ಗೆ ಟಿಕೆಟ್ ಕೊಟ್ಟಿದ್ದಾರೆ. ಯದುವೀರ್ ಹೆಸರು ಇರಲೇ ಇಲ್ಲ. ಆದರೆ ದೇವೆಗೌಡರೆ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿ ಯದುವೀರ್ ಅವರನ್ನ ನಿಲ್ಲಿಸಿದ್ದಾರೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯ, ಹಾಸನಕ್ಕೆ ಅನುಕೂಲವಾಗುತ್ತೆ ಅಂತ ಅವರ ಸ್ವಾರ್ಥಕ್ಕಾಗಿ ಯದುವೀರ್ ಒಡೆಯರ್ ಅವರನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ನಾನು ದೇವೇಗೌಡರ ಹತ್ತಿರ ಸಂಬಂಧಿ. ಅವರು ಸ್ವಾರ್ಥ ಎಂಬ ಕಾರಣಕ್ಕೆ ನಾನು ದೂರ ಉಳಿದೆ. ನಾನು ರಾಜಕೀಯ ಸಾಕು, ಬಿಡಬೇಕು ಅಂದ್ಕೊಂಡಿದ್ದೆ. ಸಿಎಂ ಸಿದ್ದರಾಮಯ್ಯ ರಾಜಕಾರಣದಲ್ಲಿ ಉಳಿಸಿಕೊಂಡರು ಎಂದರು.
ಮೈಸೂರು ಕೊಡಗು ಕ್ಷೇತ್ರದಲ್ಲಿ ಒಕ್ಕಲಿಗ ಜಾತಿ ಕಾರ್ಡ್ ಪ್ಲೇ ಮಾಡಿದ ಕಾಂಗ್ರೆಸ್ ನಾಯಕರು
ನಾನು ಯಾವ ಜಾತಿಗೆ ಸೇರಿದ್ದಿನೋ, ಲಕ್ಷ್ಮಣ್ ಸವದಿ ಕೂಡ ಅದೇ ಜಾತಿಯವರು. ಪ್ರತಾಪ್ ಸಿಂಹ ಇವರನ್ನ ಒಕ್ಕಲಿಗರಲ್ಲ ಅಂದರು. ಲಕ್ಷ್ಮಣ್ರವರು ತಮ್ಮ ಕುಟುಂಬ ಸದಸ್ಯರ ಬಗ್ಗೆ ಮಾಹಿತಿಯನ್ನೇ ನೀಡಿದ್ದರು. ಹಾಗಾಗಿ ನಿಮಗೆ ಯಾವುದೇ ಸಂಶಯ ಬೇಡ ಅವರು ಒಕ್ಕಲಿಗರೇ. ಪ್ರತಾಪ್ ಸಿಂಹ ಬೇರೆ ಕಡೆ ಬಂದವರು. ಲಕ್ಷ್ಮಣ್ ಇಲ್ಲಿಯವರೆ ಮೈಸೂರಿನವರೇ, ಮೈಸೂರಿನಲ್ಲೇ ನೆಲೆಸಿದ್ದಾರೆ ಎಂದು ಹೇಳಿದ್ದಾರೆ.