ಕೋಲಾರ: ನಮ್ಮಲ್ಲಿ ಈಗ ಯಾವುದೇ ಗೊಂದಲ, ಗುಂಪುಗಾರಿಕೆ ಇಲ್ಲ ಆಂತರಿಕ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟ ಪಕ್ಷ ನಮ್ಮದು ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕು ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.
ಮುಳಬಾಗಿಲು ತಾಲೂಕಿನ ಕುರುಡುಮಲೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ 28 ಕ್ಷೇತ್ರದಲ್ಲಿ ಎಲ್ಲಾದರೂ ಒಬ್ಬ ಟಿಕೆಟ್ ಆಕಾಂಕ್ಷಿ ಮಾತ್ರ ಇದ್ದರೇ ಎಲ್ಲ ಕಡೆ ಇಬ್ಬರು, ಮೂವರು ಆಕಾಂಕ್ಷಿಗಳು ಇದ್ದರು. ಪ್ರಜಾಪ್ರಭುತ್ವದಲ್ಲಿ ಅವರವರ ಭಾವನೆಗಳನ್ನು ವ್ಯಕ್ತಪಡಿಸಲು ಅವಕಾಶ ಇರುತ್ತದೆ. ಈ ಕ್ಷೇತ್ರಕ್ಕೆ ಸಂಬಂಧಿಸಂತೆ ಅಭಿಪ್ರಾಯ ಕೇಳದ ಘೋಷಣೆ ಮಾಡಲಾಗುತ್ತಿದೆ ಎಂಬ ಗೊಂದಲ ಕೆಲ ಶಾಸಕರು ಅಷ್ಟೇ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಕೂಡ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಅಭ್ಯರ್ಥಿ ಕೆ.ವಿ.ಗೌತಮ್ ಕೂಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ ಎಂದರು.
ಅತಿ ಹೆಚ್ಚಿನ ಮತಗಳಲ್ಲಿ ನಾವು ಗೆಲ್ಲುತ್ತೇವೆ. ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೆ ರಮೇಶ್ ಕುಮಾರ್ ಸೇರಿದ್ದಾರೆ. ಗುರುವಾರದಿಂದ ಅವರೂ ಪ್ರಚಾರಕ್ಕೆ ಬರುತ್ತಾರೆ. ಕುರುಡುಮಲೆಯ ವಿನಾಯಕನ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದೇವೆ. ಅಧಿಕೃತವಾಗಿ ಗುರುವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ ಮೂಲಕ ಪ್ರಚಾರ ಆರಂಭವಾಗಲಿದೆ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಯಾವುದೇ ಒಬ್ಬರ ಮೇಲೆ ಜವಾಬ್ದಾರಿ ಹಾಕಲ್ಲ ಎಲ್ಲರ ಮೇಲೆ ಜವಾಬ್ದಾರಿ ಇದೆ. ಕ್ಷೇತ್ರದಲ್ಲಿ ನಾನು, ಡಾ.ಎಂ.ಸಿ.ಸುಧಾಕರ್ ಹಾಗೂ ಐವರು ಶಾಸಕರು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೆವು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನರು ಮತ್ತೆ ನಮ್ಮ ಕೈ ಹಿಡಿಯುತ್ತಾರೆ. 20ಕ್ಕೂ ಅಧಿಕ ಸ್ಥಾನ ಪಡೆಯುತ್ತೇವೆ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಗರಂ ಆದ ಸಚಿವರು, ನಮ್ಮಲ್ಲಿ 136 ಶಾಸಕರು ಇದ್ದಾರೆ. ಏನು ಹೈಜಾಕ್ ಮಾಡಿ ಕರೆದುಕೊಂಡು ಹೋಗುತ್ತಾರಾ ದುಡ್ಡು ಇದ್ದ ಮಾತ್ರಕ್ಕೆ ಎಲ್ಲಾ ಕೆಲಸ ಮಾಡಲು ಆಗಲ್ಲ. ವಿಜಯೇಂದ್ರ ಅವರು 5 ವರ್ಷ ಇದೇ ರೀತಿ ಕನಸು ಕಾಣುತ್ತಿರಲಿ’ ಎಂದು ತಿರುಗೇಟು ನೀಡಿದರು.
ಪ್ರಚಾರದಲ್ಲಿ ಭಾಗವಹಿಸುವ ಹಿರಿಯ ನಾಯಕರು
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಇಬ್ಬರೂ ಪ್ರಚಾರದಲ್ಲಿ ಭಾಗವಹಿಸುತ್ತಾರೆ. ಹೈಕಮಾಂಡ್ ಸೂಚನೆಯಂತೆ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ತಾಲ್ಲೂಕಿನ ಕುರುಡುಮಲೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್ ಕೇಳಲು ಎಲ್ಲರಿಗೂ ಹಕ್ಕು ಇದೆ. ಪಕ್ಷ ಒಬ್ಬರಿಗೆ ಟಿಕೆಟ್ ಕೊಡಲು ಮಾತ್ರ ಸಾಧ್ಯ ಗ್ರಾಮ ಪಂಚಾಯತಿ ಚುನಾವಣೆಗೂ ಪೈಪೋಟಿ ಇರುತ್ತದೆ. ನಮ್ಮಲ್ಲೂ ಅಸಮಾಧಾನ ಇದ್ದದ್ದು ನಿಜ. ಆದರೆ, ಈಗ ಎಲ್ಲವೂ ಸರಿ ಹೋಗಿದೆ. ಹೈಕಮಾಂಡ್ ಸೂಚಿಸಿದ ವ್ಯಕ್ತಿಗೆ ಸಹಕಾರ ನೀಡುತ್ತಾರೆ’ ಎಂದರು.
ರಾಜಕಾರಣದಲ್ಲಿ ಭಿನ್ನಾಭಿಪ್ರಾಯ ಸಹಜ. ರಾಜೀನಾಮೆ ಸಂಬಂಧ ಕ್ಷಮೆಯಾಚಿಸಿದ್ದೇವೆ. ವಿಷಾದ ಕೂಡ ವ್ಯಕ್ತಪಡಿಸಿದ್ದೇವೆ. ಈ ವಿಚಾರ ಮುಗಿದ ಅಧ್ಯಾಯ. ಇನ್ನು ಅಭ್ಯರ್ಥಿ ಗೆಲ್ಲಿಸುವುದು ನಮ್ಮ ಗುರಿ ಘಟಬಂಧನ್ ಮೇಲುಗೈ ಸಾಧಿಸಿದೇ ಎಂಬ ಪ್ರಶ್ನೆಗೆ, ಘಟಬಂಧನ್ ಎಂಬುದು ಮಾಧ್ಯಮಗಳ ಸೃಷ್ಟಿ. ನಾವೇನಾದರೂ ಘಟಬಂಧನ್ ಎಂದು ಹೆಸರು ಇಟ್ಟಿದ್ದೇವೆಯೇ ನೋಂದಣಿ ಮಾಡಿಕೊಂಡಿದ್ದೇವೆಯೇ ಎಂದು ಪ್ರಶ್ನಿಸಿದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಅವರ ಪಕ್ಷದವರೇ ಮಾತನಾಡುತ್ತಿದ್ದಾರೆ. ಕೋವಿಡ್ ಕಾಲದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದರು. ನಮಗಿಂತ ಹೆಚ್ಚಾಗಿ ಅವರ ಪಕ್ಷದವರೇ ಸತ್ಯ ಹೊರಹಾಕುತ್ತಿದ್ದಾರೆ. ಜನರಿಗೂ ಗೊತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಅದೇ ಗತಿ ಬರಲಿದೆ ಎಂದರು.
……………………………..
ಕಳೆದ ಲೋಕಸಭೆ ಚುನಾವಣೆಯಲ್ಲಿ ಇದ್ದ ವಾತಾವರಣವೇ ಬೇರೆ. ಈ ಬಾರಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿವೆ. ಅದರ ಮೇಲೆಯೇ ಚುನಾವಣೆ ನಡೆಸುತ್ತೇವೆ. ಧರ್ಮ, ಜಾತಿ ಹೊಡೆಯುವವರ ವಿರುದ್ಧ, ಸುಳ್ಳು, ಜಾತೀಯತೆ ವಿರುದ್ಧದ ಚುನಾವಣೆ ಕೂಡ ಇದಾಗಿದೆ.
ಬೈರತಿ ಸುರೇಶ್, ಕಾಂಗ್ರೆಸ್ ಶಾಸಕ