ಮೈಸೂರು: ಇಂದು ಯದುವೀರ್ ನಾಮಪತ್ರ ಸಲ್ಲಿಕೆ ಹಿನ್ನಲೆ ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿರುವ ಮಹನೀಯರ ಪ್ರತಿಮೆಗೆ ಯದುವೀರ್ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಅರಮನೆ ಮುಂಭಾಗದಲ್ಲಿರುವ ಹತ್ತನೇ ಚಾಮರಾಜ ಒಡೆಯರ್ ಪ್ರತಿಮೆಯಿಂದ ಪುಷ್ಪಾರ್ಚನೆ ಆರಂಭವಾಗಿ ಸ್ವಾತಂತ್ರ ಹೋರಾಟಗಾರರು ಮತ್ತು ಬಿ.ಆರ್ ಅಂಬೇಡ್ಕರ್ ಸೇರಿದಂತೆ ಮಹನೀಯರ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ಮೋದಿ ವರ್ಚಸ್ಸು ಕುಗ್ಗಿಲ್ಲ. ಅದು ದಿನೇ ದಿನೇ ಹೆಚ್ಚಾಗುತ್ತಿದೆ. 10 ವರ್ಷಗಳಲ್ಲಿ ಅವರು ಮಾಡಿರುವ ಕೆಲಸಗಳನ್ನ ಯಾರ ಜೊತೆಯಲ್ಲೂ ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಕೊಟ್ಟರು. ಬಳಿಕ ಯದುವೀರ್ ಯಾರೆಂಬುದು ನಮಗೆ ಗೊತ್ತಿಲ್ಲ ಎಂಬ ಸಚಿವ ವೆಂಕಟೇಶ್ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಅವರು, ರಾಜರ ಕೊಡುಗೆ ಏನೆಂಬುದು ಇಡೀ ನಾಡಿಗೆ ಗೊತ್ತಿದೆ. ಕಳೆದ 9 ವರ್ಷಗಳಲ್ಲಿ ನಾನು ಕೂಡ ಮೈಸೂರಿನಾಧ್ಯಂತ ಸಂಚಾರ ಮಾಡಿದ್ದೇನೆ. ಜನರು ಕೂಡ ನನ್ನನ್ನ ನೋಡಿದ್ದಾರೆ. ಇದಕ್ಕೆಲ್ಲಾ ಜನರೇ ಉತ್ತರ ಕೊಡುತ್ತಾರೆ ಎಂದು ಹೇಳಿದರು.