ನಂಜನಗೂಡಿನಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಮುಖಂಡರ ಸಭೆ ನಡೆಸಲಾಯಿತು ತಾಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹಾಗೂ ಮತ್ತಿತರ ಗಣ್ಯರು ದೀಪ ಬೆಳಗಿಸಿ ದಿವಂಗತ ಧೃವ ನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು
ಬಳಿಕ ಅವರು ಮಾತನಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗಾಗಿ ಕೋಮುವಾದಿ ಹಾಗೂ ಮತೀಯವಾದಿ ಬಿಜೆಪಿಯನ್ನು ಸೋಲಿಸುವ ಮೂಲಕ ಬಿಜೆಪಿಯನ್ನು ದೂರವಿಡಿ ಎಂದು ಬಿಜೆಪಿ ಪಕ್ಷದ ಹಾಗೂ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ನಂಜನಗೂಡಿನಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಯಾವುದೇ ಭಿನ್ನಮತವಿಲ್ಲದೆ ಒಗ್ಗಟ್ಟಿನಿಂದ ಶಾಸಕ ದರ್ಶನ್ ದ್ರುವನಾರಾಯಣ್ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿ ನಮ್ಮ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಹೆಚ್ಚಿನ ಮತ ಕೊಡಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿ ಇದಕ್ಕೆ ನನ್ನ ಮತ್ತು ಸಿಎಂ ಸಿದ್ದರಾಮಯ್ಯನವರ ಸಂಪೂರ್ಣ ಬೆಂಬಲವಿದೆ ಎಂದು ಪುತ್ರ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು