ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಮೇದುವಾರಿಕೆ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರಗೆ ಯದುವೀರ್ ಒಡೆಯರ್ ಅವರು ಉಮೇದುವಾರಿಕೆ ಸಲ್ಲಿಸಿದ್ದು, ಯದುವೀರ್ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು.