ಮೈಸೂರು: ಬಿಜೆಪಿಯಿಂದ ಎಂ.ಎಲ್.ಸಿಯಾಗಿ ನಾಮನಿರ್ದೇಶನ ಆಗಿದ್ದರೂ ಅಂತರ ಕಾಯ್ದುಕೊಂಡಿದ್ದ ಅಡಗೂರು ಎಚ್.ವಿಶ್ವನಾಥ್ ನಿವಾಸಕ್ಕೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹಾಗೂ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದರು. ಈ ವೇಳೆ ಬಿ.ವೈ.ವಿಜಯೇಂದ್ರ ಹಾಗೂ ಯದುವೀರ್ ಗೆ ಆರತಿ ಬೆಳಗಿ ಸ್ವಾಗತ ಕೋರಲಾಯಿತು. ಈ ಸಂದರ್ಭ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ, ಮುಖಂಡರಾದ ಡಿ.ಮಾದೇಗೌಡ, ರಾಜೇಂದ್ರ, ಶಿವಕುಮಾರ್ ಸೇರಿದಂತೆ ಪ್ರಮುಖರು ಸಾಥ್ ನೀಡಿದರು.