ರಾಮನಗರ: ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರು ಹಾಗೂ ಚುನಾವಣಾ ವೆಚ್ಚ ವೀಕ್ಷಕರನ್ನು ಮಂಗಳವಾರ ನೇಮಕ ಮಾಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ.
ಕುಣಿಗಲ್, ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ, ಆನೇಕಲ್, ಮಾಗಡಿ, ರಾಮನಗರ, ಚನ್ನಪಟ್ಟಣ ಹಾಗೂ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಡಿ. ಅಮೋಯ್ ಕುಮಾರ್ (ಮೊ: 7349648632) ಅವರನ್ನು ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಇವರಿಗೆ ಚನ್ನಕೇಶವ (ಮೊ: 9611077744) ಇವರನ್ನು ಲೈಸನಿಂಗ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಕುಣಿಗಲ್, ಮಾಗಡಿ, ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿ. ಜಯರಾಘವನ್ (ಮೊ: 8971509567) ಅವರನ್ನು ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಇವರಿಗೆ ಮಂಜುನಾಥ್ (ಮೊ: 9845367378) ಅವರನ್ನು ಲೈಸನಿಂಗ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ, ಆನೇಕಲ್ ಹಾಗೂ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಜಿತೇಂದ್ರ ಸಿಂಗ್ (ಮೊ: 9632741952) ಅವರನ್ನು ಚುನಾವಣಾ ವೆಚ್ಚ ವೀಕ್ಷಕರಾಗಿ ನೇಮಿಸಲಾಗಿದೆ. ಇವರಿಗೆ ಶಾಂತಿಪ್ರಿಯ (ಮೊ: 9448655014) ಅವರನ್ನು ಲೈಸನಿಂಗ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.