ಬಾಗೇಪಲ್ಲಿ: ಬಾಗೇಪಲ್ಲಿ ತಾಲೂಕಿನ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಕ್ ಪೋಸ್ಟ್ ಗೆ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಎಂಸಿಸಿ ನೋಡಲ್ ಅಧಿಕಾರಿ ಹೇಮಾವತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊರ್ಲಪರ್ತಿ ಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ- 2024 ರ ಅಂಗವಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಅಂಗನವಾಡಿ ಮೇಲ್ವಿಚಾರಕರಿಗೆ, ಆಶಾ ಕಾರ್ಯಕರ್ತರಿಗೆ, ಶಾಲಾ ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಬಣ್ಣ ಬಣ್ಣ ರಂಗೋಲಿಗಳ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಬಾಗೇಪಲ್ಲಿ ತಹಸೀಲ್ದಾರ್ ಪ್ರಶಾಂತ್ ಕೆ ಪಾಟೀಲ್, ಗುಡಿಬಂಡೆ ತಹಶೀಲ್ದಾರ್ ಮನಿಷಾ,ಕಾರ್ಯನಿರ್ವಾಹಣಾಧಿಕಾರಿ ಆರ್. ಹೇಮಾವತಿ, ತಾಲ್ಲೂಕಿನ ಎಲ್ಲಾ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಬಾಗೇಪಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಬಾಗೇಪಲ್ಲಿ ತಾ ಪಂ ಇಒ ಸೋಮವಾರ ಸಂಜೆ ಬಾಗೇಪಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ ಪ್ರದರ್ಶಿಸುವ ಮೂಲಕ ಸಮಾಜಿಕ ಜಾಲತಾಣಗಳಲ್ಲಿ ಮತದಾರರು ಮಾಹಿತಿ ಪಡೆಯುವ ವಿ.ಎಚ್.ಎ ಆಪ್ ಬಗ್ಗೆ ಜಾಗೃತಿ ಮೂಡಿಸಿದರು ಮತ್ತು ಮೇಣದಬತ್ತಿ ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಸಿದರು.
ಈ ವೇಳೆ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ನೆರೆದಿದ್ದವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಗೌರಿಬಿದನೂರು: ಗೌರಿಬಿದನೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ – 2024 ರ ಸಂಬಂಧ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಮಹೇಶ್ ಪತ್ರಿ ಅವರ ನೇತೃತ್ವದಲ್ಲಿ ಗೌರಿಬಿದನೂರು ನಗರದಲ್ಲಿ ಸೋಮವಾರ ಸಂಜೆ ಪಂಜಿನ ಮೆರವಣಿಗೆ ಮಾಡುವುದರ ಮುಖಾಂತರ ಮತದಾನಕ್ಕಿಂತ ಇನ್ನೊಂದಿಲ್ಲ ಎಲ್ಲರೂ ಸಹ ಖಚಿತವಾಗಿ ತಮ್ಮ ಅಮೂಲ್ಯವಾದ ಮತದಾನವನ್ನು ಮಾಡಲೇಬೇಕೆಂದು ಅರಿವು ಮೂಡಿಸಲಾಯಿತು.
ಈ ವೇಳೆ ಪೌರಾಯುಕ್ತೆ ಗೀತಾ, ಅಂಗನವಾಡಿ ಕಾರ್ಯಕರ್ತರು ಎಲ್ಲಾ ನಗರಸಭಾ ಸಿಬ್ಬಂದಿ ರವರು ಭಾಗವಹಿಸಿದ್ದರು.
ಮಂಚೇನಹಳ್ಳಿ: ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಮಂಚೇನಹಳ್ಳಿ ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಮಂಚೇನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸೋಮವಾರ ಸಂಜೆ ಮೇಣದಬತ್ತಿ ಮೆರವಣಿಗೆಯ ಮೂಲಕ ಸಾರ್ವಜನಿಕರಲ್ಲಿ ಮತದಾನ ಜಾಗೃತಿಯ ಅರಿವು ಮೂಡಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಚಿಂತಾಮಣಿ: ಚಿಂತಾಮಣಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಕೋನಪ್ಪಲ್ಲಿ ಗ್ರಾಮ ಪಂಚಾಯತಿಯ ಶಾಲಾ ಆವರಣದಲ್ಲಿ ಚಿಂತಾಮಣಿ ತಾಲೂಕು ಪಂಚಾಯಿತಿ ಇಒ ನೇತೃತ್ವದಲ್ಲಿ ಗ್ರಾಮಸ್ಥರಿಗೆ, ಸಾರ್ವಜನಿಕರಿಗೆ ಚುನಾವಣಾ ಮತದಾನದ ಬಗ್ಗೆ ಅರಿವು ಮೂಡಿಸಿ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.