ಪ್ರತಿನಿಧಿ ವರದಿ ಕೊಳ್ಳೇಗಾಲ
ಬಿಜೆಪಿ ಸಂಸದ ಹಾಗೂ ಮುತ್ಸದಿ ರಾಜಕಾರಣಿಯಾದ ವಿ.ಶ್ರೀನಿವಾಸಪ್ರಸಾದ್ ಅವರ ಅಭಿಮಾನಿ ಬಳಗದ ಮುಖಂಡರು ಹನೂರು ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಮುಂದಾಗುತ್ತಿರುವುದು ಸ್ವಾಗತಾರ್ಥ ಎಂದು ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್ ತಿಳಿಸಿದ್ದಾರೆ.
ವಿ.ಶ್ರೀನಿವಾಸ ಪ್ರಸಾದ್ ಅವರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗುತ್ತಿರುವ ಪ್ರಕ್ರಿಯೆಯಿಂದ ಚಾ.ನಗರ ಜಿಲ್ಲೆಯಲ್ಲಿ ನಮ್ಮ ಪಕ್ಷವನ್ನು ಇನ್ನಷ್ಟು ಬಲವರ್ಧನೆಗೊಳಿಸಲಿದೆ. ಹಾಗಾಗಿ, ಶೀಘ್ರವೇ ವಿ.ಶ್ರೀನಿವಾಸಪ್ರಸಾದ್ ಅವರ ಬೆಂಬಲಿಗರನ್ನು ಸ್ವಾಗತಿಸಲು ವೇದಿಕೆ ಸಜ್ಜುಗೊಳಿಸಲಾಗುತ್ತಿದೆ ಎಂದು ಶಿವಕುಮಾರ್ ಭಾನುವಾರ ಪ್ರತಿನಿಧಿಗೆ ತಿಳಿಸಿದರು.
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಳಿಯ ಡಾ.ಮೋಹನ್ ಕುಮಾರ್ ಅವರಿಗೆ ಬಿಜೆಪಿ ಪಕ್ಷದ ವರಿಷ್ಠರು ಚಾ.ನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿರುವ ಹಿನ್ನೆಲೆ ಸ್ವಾಭಿಮಾನಿ ಮುತ್ಸದಿ ರಾಜಕಾರಣಿ ವಿ.ಶ್ರೀನಿವಾಸ ಪ್ರಸಾದ್ ಅವರು, ಬಿಜೆಪಿ ಪಕ್ಷದ ರಾಜಕೀಯ ಪ್ರಚಾರದಿಂದ ದೂರ ಉಳಿದಿದ್ದಾರೆ. ಹಾಗಾಗಿ, ಈ ಚುನಾವಣೆಯಲ್ಲಿ ಚಾ.ನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಆನೆ ಬಲ ಬಂದಂತಾಗಿದೆ ಎಂದು ಅಭಿಪ್ರಾಯಪಟ್ಟಿರುವ ಅವರು, ಈ ಎಲ್ಲಾ ಸನ್ನೀವೇಶಗಳಿಂದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಚುನಾವಣೆಯಲ್ಲಿ ಅತ್ಯಂತ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
1ಕೆಜಿಎಲ್-3
ಫೋಟೋ ಶೀರ್ಷಿಕೆ:
ಮಧುವನಹಳ್ಳಿ ಶಿವಕುಮಾರ್ ಫೋಟೋ ಇದೆ.