ಮೈಸೂರು:ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ ತಯಾರಿಸುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ ಜಂಟಿ ಆಯುಕ್ತರು ದಾಳಿ ಮಾಡಿದ್ದಾರೆ. ದೂರವಾಣಿ ಮೂಲಕ ಬಂದ ಮಾಹಿತಿ ಆಧರಿಸಿ ದಾಳಿ ಮಾಡಿದ ಅಧಿಕಾರಿಗಳು, ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಪತ್ತೆಯಾಗಿದೆ. ದಾಳಿಯಲ್ಲಿ 98.52 ಕೋಟಿ ರೂಪಾಯಿಗಳ ಮೂಲಕ ಬಿಯರ್ ಬಾಟಲ್ಗಳು, ಯುಟಿ ಟ್ಯಾಂಕ್ಗಳು, ಸೈಲೋಸ್ ಟ್ಯಾಂಕ್ಗಳು ಮತ್ತು ಇತರ ಕಚ್ಚಾ ವಸ್ತುಗಳು ಜಪ್ತಿ ಆಗಿವೆ. ಈ ದಾಳಿಗೆ ಸಂಬಂಧ 17 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ನಾಪತ್ತೆಯಾದವರಿಗಾಗಿ ಹುಡುಕುತ್ತಿರುವ ಅಬಕಾರಿ ಪೊಲೀಸರು ತನಿಖೆ ನಡೆಸಲಾಗುತ್ತಿದೆ.