ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅಭಿಪ್ರಾಯ
ಹುಲ್ಲಹಳ್ಳಿ : ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ರಾಜ್ಯಕ್ಕೆ ಮೋದಿಯ ಅಭಿವೃದ್ಧಿ ಶೂನ್ಯವಾಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಹೇಳಿದರು.
ನಂಜನಗೂಡು ತಾಲೂಕ ಹುಲ್ಲಹಳ್ಳಿ ಗ್ರಾಮದ ಚಂದ್ರೋದಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.
ರಾಜ್ಯಕ್ಕೆ ಮೋದಿ ಕೊಡುಗೆ ಏನು ಇಲ್ಲ. ಆದರೂ ರಾಜ್ಯದಲ್ಲಿ ಬಿಜೆಪಿ ಮುಖಂಡರು ಸಮರ್ಥಿಕೊಳ್ಳುತ್ತಿದ್ದಾರೆ. 10 ವರ್ಷ ಕೇಂದ್ರದಲ್ಲಿ ಬಿಜೆಪಿ ಆಡಳಿತ ಮಾಡಿ ನುಡಿದಂತೆ ನಡೆಯಲಿಲ್ಲ. ಸುಳ್ಳನ್ನು ಹೇಳಿ ಜನರಿಗೆ ಮೊಸ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ನುಡಿದಂತೆ ನಡೆದಿರುವ ನಮ್ಮ ಕಾಂಗ್ರೆಸ್ ಸರ್ಕಾರವಾಗಿದೆ ಎಂದರು.
ರಾಜ್ಯದಲ್ಲಿ ಬರಗಾಲವಿದ್ದರೂ ಕೇಂದ್ರ ಸರ್ಕಾರ ಯಾವುದೇ ಪರಿಹಾರ ನೀಡದೆ ಕರ್ನಾಟಕ ರಾಜ್ಯವನ್ನು ಕಡೆಗಣಿಸುತ್ತಿದೆ. ನಾನು ಈ ತಾಲೂಕಿನ ಮನೆ ಮಗನಾಗಿದ್ದು ನನಗೆ ಈ ಬಾರಿ ಒಂದು ಅವಕಾಶವನ್ನು ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಿದರು.
ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿದ್ದ ದಿ ಆರ್ ಧ್ರುವನಾರಾಯಣ್ ಅವರು ಕ್ಷೇತ್ರದ ಅಭಿವೃದ್ಧಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ. 2019ರ ಚುನಾವಣೆಯಲ್ಲಿ ಸೋತರೂ ಮನೆಯಲ್ಲಿ ಕೂರದೇ ಕ್ಷೇತ್ರದಲ್ಲಿ ಸುತ್ತಾಡಿ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದಾರೆ. ಅವರ ಹಾದಿಯಲ್ಲಿ ಸುನೀಲ್ ಬೊಸ್ ಅವರೂ ಕೂಡ ಸಾಗಿ ಕ್ಷೇತ್ರದ ಅಭಿವೃದ್ಧಿ ಪ್ರಾಮಾಣಿಕವಾಗಿ ಶ್ರಮಿಸುತ್ತಾರೆ. ಆದ್ದರಿಂದ ಪ್ರತಿಯೊಬ್ಬ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೊಸ್ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಕೆ. ಮಾರುತಿ, ಬ್ಲಾಕ್ ಅದ್ಯಕ್ಷ ಶ್ರೀಕಂಠನಾಯಕ, ಜಿಪಂ ಮಾಜಿ ಅಧ್ಯಕ್ಷೆ ಲತಾಸಿದ್ದಶೆಟ್ಟಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ತಾಪಂ ಮಾಜಿ ಸದಸ್ಯ ಎಚ್.ಎಂ.ಮೂಗಶೆಟ್ಟಿ, ವೀರಶೈವ ತಾಲೂಕು ಅದ್ಯಕ್ಷ ಬುಲೆಟ್ ಮಹದೇವಪ್ಪ, ಮುಖಂಡರಾದ ಇಂಧನಬಾಬು, ತರಗನಹಳ್ಳಿ ನಂಜುಂಡಸ್ವಾಮಿ, ದೇಬೂರು ಆಶೋಕ್, ಗಿರೀಶ್, ಮಡಿಕೆಹುಂಡಿ ಶಿವಣ್ಣ, ಅಭಿನಂದನ್ ಪಾಟೀಲ್, ಕಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಶಿವ ನಾಗಪ್ಪ ಹರದನಹಳ್ಳಿ ಸೋಮೇಶ್ ಅಣ್ಣ, ಬಸವಣ್ಣ, ಶಿವನಾಯಕ, ಗ್ರಾಪಂ ಸದಸ್ಯರಾದ ಮಂಜು, ಸೋಮಶೇಖರ್ ಹುಲಹಳ್ಳಿ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠನಾಯಕ ನದೀಮ್ ಅಹಮದ್ ಕಾಶಿ ಮಲ್ಲೇಶ್ ಮರಿಸ್ವಾಮಿ ಮಹದೇವಸ್ವಾಮಿ, ಕಡಬೂರು ನಂದೀಶ, ಚಂದ್ರವಾಡಿ ಜಯರಾಮ್ ಹಾಜರಿದ್ದರು.