ಪ್ರತಿನಿಧಿ ವದಿ ಚಾಮರಾಜನಗರ
ತಾಲೂಕಿನ ಕೂಡ್ಲೂರು, ಮಾದಾಪುರ ಸೇರಿದಂತೆ ಹಲವು ಗ್ರಾಮಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ತಮ್ಮ ಬೆಂಬಲಿಗರೊಂದಿಗೆ ಭೇಟಿ ನೀಡಿ, ಗ್ರಾಮದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಮತಯಾಚಿಸಿದರು.
ನಂತರ ಮಾತನಾಡಿದ ಅವರು, ಕಾಂಗ್ರೆಸ್ ನುಡಿದಂತೆ ನಡೆದ ಪಕ್ಷ. ಐದು ಗ್ಯಾರೆಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಯಾವಾಗಲೂ ಕೂಡಾ ಬಡವರ ಪರವಾಗಿರುವ ಪಕ್ಷವಾಗಿದೆ. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
2013 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಉಸ್ತುವಾರಿ ಸಚಿವರಾಗಿದ್ದ ದಿ.ಎಚ್.ಎಸ್.ಮಹದೇವ ಪ್ರಸಾದ್, ಸಂಸದರಾಗಿದ್ದ ಆರ್.ಧ್ರುವನಾರಾಯಣ್ ಅವರು ಇದ್ದಂತಹ ಸಂದರ್ಭದಲ್ಲಿ ನಾನೂ ಕೂಡಾ ಸಾಕಷ್ಟು ಅನುದಾನಗಳನ್ನು ತಂದಿದ್ದೇನೆ. ಆ ಮೂಲಕ ಜಿಲ್ಲೆಯನ್ನು ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ ಎಂದರು.
ದೀನ ದಲಿತರ, ಬಡವರ, ಸಾಮಾನ್ಯ ಜನರ ಜನಪರವಾಗಿ ಕೆಲಸ ಮಾಡಿದಂತಹ
ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರ. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಸುನೀಲ್ ಬೋಸ್ ಅವರಿಗೆ ಅತ್ಯಧಿಕ ಮತಗಳನ್ನು ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ, ಮಹಮ್ಮದ್ ಅಸ್ಗರ್, ಒಬಿಸಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ.ಮಹದೇವಶೆಟ್ಟಿ, ಮಾದಾಪುರ ಗ್ರಾಪಂ ಅಧ್ಯಕ್ಷ ರೂಪೇಶ್, ಎಪಿಎಂಸಿ ಸದಸ್ಯ ಆಲೂರು ಪ್ರದೀಪ್, ಕಾಗಲವಾಡಿ ಚಂದ್ರು, ಮಾಜಿ ಅಧ್ಯಕ್ಷ ನಾಗೇಂದ್ರ, ಶಿವಕುಮಾರ್, ಕೋಡಿಮೋಳೆ ಪ್ರಕಾಶ್, ತಾ.ಪಂ.ಮಾಜಿ ಸದಸ್ಯ ಮಹದೇವಶೆಟ್ಟಿ, ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷ ಮೂರ್ತಿ ಇದ್ದರು.
6ಸಿಎಚ್ಎನ್.1: ಚಾಮರಾಜನಗರ ತಾಲೂಕಿನ ಕೂಡ್ಲೂರು, ಮಾದಾಪುರ ಸೇರಿದಂತೆ ಹಲವು ಗ್ರಾಮಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಮತಯಾಚಿಸಿದರು.