ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಟೀಕೆ
ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಮುಖಂಡರ ಸಭೆ
ಪ್ರತಿನಿಧಿ ವರದಿ ಕೆ.ಆರ್.ನಗರ
ನಾವು ಒಕ್ಕಲಿಗ ಸಮುದಾಯದವರು ಎನ್ನುವ ನೀವು ಇಲ್ಲಿವರೆಗೆ ಸಮುದಾಯದ ಯಾವುದೇ ಕಾರ್ಯಕರ್ತನನ್ನು ಬೆಳೆಸಲು ಮುಂದಾಗಿಲ್ಲ. ಪ್ರತಿಯೊಬ್ಬರಿಗೂ ಅನ್ಯಾಯ ಮಾಡುತ್ತಲೇ ಬಂದಿದ್ದೀರಿ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮೀಗೌಡರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿ, ತಮ್ಮ ಕುಟುಂಬದ ಉದ್ದಾರಕ್ಕಾಗಿ ಮಾತ್ರ ಶ್ರಮಿಸುತ್ತಿರುವ ಎಚ್.ಡಿ.ದೇವೆಗೌಡರು ಮತ್ತು ಕುಮಾರಸ್ವಾಮಿಯವರು ಯಾರನ್ನು ಬೆಳೆಸುತ್ತಿಲ್ಲ. ಕೇವಲ 2 ಸೀಟಿಗಾಗಿ ಬಿಜೆಪಿ ಜತೆ ಒಂದಾಣಿಕೆ ಮಾಡಿಕೊಂಡಿದ್ದಾರೆ. ಆ ಸೀಟುಗಳನ್ನು ಕೂಡ ಯಾರು ಎಲ್ಲಿ ನಿಲ್ಲಬೇಕು ಎಂಬುದನ್ನು ಬಿಜೆಪಿಯವರೇ ತಿರ್ಮಾನಿಸಿದ್ದಾರೆ. ಮೂರು ಕ್ಷೇತ್ರದಲ್ಲೂ ಅಳಿಯ, ಮಗ, ಮೊಮ್ಮಗನಿಗೆ ಆಗಬೇಕೆ ಎಂದು ವ್ಯಂಗ್ಯವಾಡಿದರು.
ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಿಮಗೆ ಅಧಿಕಾರ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಿ.ಕೆ.ಶಿವಕುಮಾರ್ ಸರ್ಕಾರ ಉಳಿಯಲು ಬಹಳ ಪ್ರಯತ್ನಿಸಿದರು ಅವರನ್ನು ಜರಿಯುತ್ತಿದ್ದೀರಿ ಆದರೇ ಇದಾವುದನ್ನು ಒಕ್ಕಲಿಗರು ಮರೆತಿಲ್ಲಾ. ಸಮುದಾಯ ಅವರ ಬೆನ್ನಿಗೆ ನಿಂತಿದ್ದು , ಮೈಸೂರು ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 15 ಮಂದಿ ಒಕ್ಕಲಿಗರಿಗೆ ಕಾಂಗ್ರೆಸ್ನಲ್ಲಿ ಟಿಕೆಟ್ ಕೊಡಿಸಿದ್ದಾರೆ ಎಂದರು.
ಶಾಸಕ ಡಿ.ರವಿಶಂಕರ್ , ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿದರು. ಶಾಸಕ ದಿನೇಶ್ ಗೂಳಿಗೌಡ, ಕೆಪಿಸಿಸಿ ಕಾರ್ಯಕಾರಣಿ ಸದಸ್ಯ ದೊಡ್ಡಸ್ವಾಮೇಗೌಡ, ಮಾಜಿ ಸದಸ್ಯ ಎಸ್.ಪಿ.ತಮ್ಮಯ್ಯ, ಪುರಸಭಾ ಸದಸ್ಯ ಕೆ.ಜಿ.ಸುಬ್ರಮಣ್ಯ, ತಾಪಂ ಮಾಜಿ ಅಧ್ಯಕ್ಷ ಬೋರೆ ನಾಗರಾಜ್, ಮಾಜಿ ಸದಸ್ಯರಾದ ಗೋವಿಂದೇಗೌಡ, ಡಿ.ನಟರಾಜ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ಎಚ್.ಎಚ್.ನಾಗೇಂದ್ರ, ಒಕ್ಕಲಿಗ ಸಂಘದ ಉಪಾಧ್ಯಕ್ಷ ಪರಶುರಾಮ, ಮುಖಂಡರಾದ ಸಂದೇಶ್, ಜಯಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಉದಯಶಂಕರ್, ಎಂ.ಎಸ್.ಮಹದೇವ್, ನಗರಾಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸೈಯದ್ ಜಾಬೀರ್ ಇನ್ನಿತರರು ಹಾಜರಿದ್ದರು.
08 ಕೆಆರ್ಎನ್-1:- ಕೆ.ಆರ್.ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಮುಖಂಡರ ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿದರು. ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕರಾದ ಡಿ.ರವಿಶಂಕರ್, ದಿನೇಶ್ ಗೂಳಿಗೌಡ, ಕೆಪಿಸಿಸಿ ಕಾರ್ಯಕಾರಣಿ ಸದಸ್ಯ ದೊಡ್ಡಸ್ವಾಮೇಗೌಡ ಇದ್ದರು.
08 ಕೆಆರ್ಎನ್-2:- ಕೆ.ಆರ್.ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಮುಖಂಡರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕರಾದ ಡಿ.ರವಿಶಂಕರ್, ದಿನೇಶ್ ಗೂಳಿಗೌಡ, ಕೆಪಿಸಿಸಿ ಕಾರ್ಯಕಾರಣಿ ಸದಸ್ಯ ದೊಡ್ಡಸ್ವಾಮೇಗೌಡರನ್ನು ಅಭಿನಂದಿಸಲಾಯಿತು.
ಕೆ.ಆರ್.ನಗರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನನಗೆ ನೀಡಿದ ಮತಕ್ಕಿಂತ ಸ್ಟಾರ್ ಚಂದ್ರುರವರಿಗೆ ಹೆಚ್ಚು ಮತ ನೀಡಿ ಲೋಕಸಭೆಗೆ ಆಯ್ಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಕೈ ಬಲಪಡಿಸೋಣ.
ರವಿಶಂಕರ್