ಪ್ರತಿನಿಧಿ ವರದಿ ಚಾಮರಾಜನಗರ
ಸರ್ಕಾರವು ಜಿಲ್ಲೆಯ 5 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 10ನೇ ತರಗತಿ ಮಕ್ಕಳಿಗೆ ಬೇಸಿಗೆ ರಜಾ ಅವಧಿಯಲ್ಲಿಯೂ ಬಿಸಿಯೂಟ ಕಾರ್ಯಕ್ರಮವನ್ನು ಏ.11 ರಿಂದ ಮೇ 28ರವರೆಗೆ 41 ದಿನಗಳ ಕಾಲ (ಭಾನುವಾರ ಮತ್ತು ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಮುಂದುವರೆಸಲಾಗುವುದು.
ಜಿಲ್ಲೆಯ ಎಲ್ಲಾ ಮಕ್ಕಳ ಪೋಷಕರು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
10ಸಿಎಚ್ಎನ್.7: