ಮೈಸೂರು: ಹುಣಸೂರಿನಲ್ಲಿ ಚುನಾವಣೆ ಜಿದ್ದಾಜಿದ್ದು ಅನ್ನೋದು ನಿಜ. ನಾನೂ ವೈಯಕ್ತಿಕವಾಗಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದೇನೆ ಎಂದು. ಜೆಡಿಎಸ್ ಶಾಸಕ ಜಿ.ಡಿ.ಹರೀಶ್ಗೌಡ ಹೇಳಿದ್ದಾರೆ. ಹುಣಸೂರಿನಲ್ಲಿ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಪ್ರಚಾರ ಮಾಡುತ್ತಿರುವ ವೇಳೆ ಮಾತನಾಡಿದ ಅವರು, ಡಿ.ದೇವರಾಜ ಅರಸು ಅವರು ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ನಾನು ಶಾಸಕ ಆಗಿದ್ದೇನೆ. ಈ ಬಾರಿಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆ. ನಮ್ಮ ಮೈತ್ರಿಯಲ್ಲಿ ಒಡಕು ಇಲ್ಲ. ಬಿಜೆಪಿ- ಜೆಡಿಎಸ್ ಕಾರ್ಯಕರ್ತರೆಲ್ಲರೂ ಸೇರಿ ಚುನಾವಣೆ ಮಾಡುತ್ತಿದ್ದೇವೆ. ಹುಣಸೂರಿನಲ್ಲಿ ಯದುವೀರ್ ಅವರಿಗೆ ಲೀಡ್ ಕೊಡಿಸುತ್ತೇವೆ.ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಎಚ್.ಡಿ.ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿ ಆಗಬೇಕು. ಡಾ.ಸಿ.ಎನ್.ಮಂಜುನಾಥ್ ಬಿಜೆಪಿಯವರು. ಅವರ ವಿಚಾರದಲ್ಲಿ ಬಿಜೆಪಿ ವರಿಷ್ಠರು ಸೂಕ್ತ ತೀರ್ಮಾನ ಮಾಡ್ತಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ ಹೇಳಿಕೆ ನೀಡಿದ್ದಾರೆ.