ಬೆಂಗಳೂರು: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಪುತ್ರನ ಬೈಕ್ ಅಪಘಾತಕ್ಕೀಡಾಗಿದೆ. ಬೆಂಗಳೂರಿನ ಬೆಳ್ಳಂದೂರು ಸಂಚಾರಿ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆಯಲ್ಲಿ ಅಪಘಾತವಾಗಿದ್ದು, ವಿನಯ್ ಕುಲಕರ್ಣಿ ಪುತ್ರ ಹೇಮಂತ್ಗೆ ಗಾಯಗಳಾಗಿವೆ. ಇಂದು ಬೆಳಿಗ್ಗೆ ಐದು ಗಂಟೆಗೆ ತೆರಳುತಿದ್ದ ಮಾರ್ಗ ಮಧ್ಯೆ ನಿಯಂತ್ರಣ ತಪ್ಪಿ ಬೈಕ್ ಉರುಳಿ ಬಿದ್ದಿದೆ. ಪರಿಣಾಮ ಹೇಮಂತ್ ಕಾಲಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.