ಪ್ರತಿನಿಧಿ ವರದಿ ಚಾಮರಾಜನಗರ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಆರ್.ಎಂ.ಕಾಂತರಾಜು ಪುತ್ರ ಕೆ.ಜಗದೀಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ತೊರೆದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಕಾಂಗ್ರೆಸ್ ನಿಂದ ಮಾತ್ರ ಸಮಾಜಿಕ ನ್ಯಾಯ ಸಾಧ್ಯ. ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದವರಿಗೆ ಆಧಿಕಾರ, ಸೂಕ್ತಸ್ಥಾನಮಾನ ಸಿಗಲಿದೆ. ಹೀಗಾಗಿ ಪಕ್ಷದ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು.
ನಗರಸಭಾ ಮಾಜಿ ಸದಸ್ಯೆ ಮಂಜುಳಾ, ಕರಿಯಪ್ಪ, ಕೂಸಪ್ಪ, ಕುಮಾರ್, ನಾಗಣ್ಣ, ಯುವ ಮುಖಂಡ ರಾಖಿ, ಮರಪ್ಪ, ಕೃಷ್ಣ ಬಿಜೆಪಿ ತೂರೆದು ಕಾಂಗ್ರೆಸ್ ಸೇರ್ಪಡೆಗೊಂಡವರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ,ಕೆ ರವಿಕುಮಾರ್, ಪ್ರಧಾನ ಕಾರ್ಯದರ್ಶಿ .ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಜಿ.ಪಂ. ಮಾಜಿ ಸದಸ್ಯ ಬಾಲರಾಜು, ನಗರಸಭಾ ಸದಸ್ಯ ಆರ್.ಎಂ.ರಾಜಪ್ಪ, ಮಹೇಶ್ ಕುದರ್, ಕಾಗಲವಾಡಿ ಚಂದ್ರು, ಬಸವಣ್ಣ, ಮಹದೇವಸ್ವಾಮಿ, ಮಹದೇವಯ್ಯ ಇತರರು ಇದ್ದರು.
14ಸಿಎಚ್ಎನ್.1: ಪುರಸಭಾ ಮಾಜಿ ಅಧ್ಯಕ್ಷ ಆರ್.ಎಂ.ಕಾಂತರಾಜು ಪುತ್ರ ಕೆ.ಜಗದೀಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ತೊರೆದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.