ಶ್ರೀರಂಗಪಟ್ಟಣ: ತಾಲೂಕು ಆಡಳಿತ, ದಲಿತ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾಲಾರ್ಪಣೆ ಮಾಡಿ ಶುಭಕೋರಿದರು.
ಇದಕ್ಕೂ ಮುನ್ನ ವಿವಿಧ ಸಂಘ ಸಂಸ್ಥೆಗಳ ನೂರಾರು ಮುಖಂಡರು ಹಾಗೂ ಮಹಿಳೆಯರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವುಳ್ಳ ವಿಶೇಷ ರಥದೊಂದಿಗೆ ಮೆರವಣಿಗೆ ನಡೆಸಿದರು. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಿತು.
ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಮೇಘನ, ದಲಿತ ಸಂಘರ್ಷ ಸಮಿತಿಯ ರವಿಚಂದ್ರ, ಕುಬೇರಪ್ಪ, ಮುಂಡುಗದೊರೆ ಮೋಹನ್, ಪಾಂಡು, ಹೊನ್ನಯ್ಯ, ಕೆ.ಟಿ.ರಂಗಯ್ಯ, ಅರಕೆರೆ ಸಿದ್ದರಾಜು, ಮಹದೇವಸ್ವಾಮಿ, ಬೆಳಗೊಳ ಮಹದೇವಸ್ವಾಮಿ, ಪ್ರಜ್ಞಾವಂತ ವೇದಿಕೆ ಅಧ್ಯಕ್ಷ ವಕೀಲ ವೆಂಕಟೇಶ್, ಕಸಾಪ ನಗರ ಘಟಕದ ಅಧ್ಯಕ್ಷ ಎನ್.ಸರಸ್ವತಿ, ಕೆಂಪೇಗೌಡ ಯುವಶಕ್ತಿ ವೇದಿಕೆ ಅಧ್ಯಕ್ಷ ಮಹೇಶ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು.
ಚಿತ್ರ 17 ಎಸ್.ಆರ್.ಪಿ – 02 ಹಾಗೂ 02ಬಿ ಶ್ರೀರಂಗಪಟ್ಟಣದಲ್ಲಿ ತಾಲ್ಲೂಕು ಆಡಳಿತ, ದಲಿತ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. 133