ಪ್ರತಿನಿಧಿ ವರದಿ ಕೆ.ಆರ್.ನಗರ
ಪಟ್ಟಣದ ಬ್ರೈಟ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಿ.ಆರ್.ಲಿಖಿತ್ಗೌಡ 600ಕ್ಕೆ 584 ಅಂಕಗಳನ್ನು ಪಡೆದು ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾನೆ.
ಈತ ತಾಲೂಕಿನ ಚೀರ್ನಹಳ್ಳಿ ಗ್ರಾಮದ ಸಿ.ಎಂ.ರವಿ ಮತ್ತು ಸಿ.ಎಸ್.ಭಾರತಿ ದಂಪತಿಗಳ ಪುತ್ರನಾಗಿದ್ದು, ಈತ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಪೋಷಕರಿಗೆ ಕೀರ್ತಿ ತಂದು ಕೊಟ್ಟಿದ್ದಾನೆ. ಈತನ ಸಾಧನೆಯನ್ನು ಗ್ರಾಮಸ್ಥರು ಕೊಂಡಾಡಿದ್ದಾರೆ.
ಕನ್ನಡ 99, ಇಂಗ್ಲೀಷ್ 91, ಅರ್ಥಶಾಸ್ತ್ರ 97, ವ್ಯವಹಾರ ಅಧ್ಯಯನ 99, ಲೆಕ್ಕಶಾಸ್ತ್ರ 99, ಮತ್ತು ಗಣಕ ವಿಜ್ಞಾನದಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದಾನೆ.
ಈತನ ತಂದೆ ಸಿ.ಎಂ.ರವಿ ಹೊಸಅಗ್ರಹಾರ ಗ್ರಾಮದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ನಿಲಯಪಾಲಕನಾಗಿದ್ದು, ಪ್ರಸ್ತುತ ತಾಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶಾಸಕರ ಅಭಿನಂದನೆ- ಈತನ ಸಾಧನೆಯನ್ನುಗುರುತಿಸಿದ ಶಾಸಕ ಡಿ.ರವಿಶಂಕರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ.ಅರುಣ್ಕುಮಾರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಚೀರ್ನಹಳ್ಳಿಶಿವಣ್ಣ, ತಾಲೂಕು ಕಾಂಗ್ರೆಸ್ ಮುಖಂಡ ಚೀರ್ನಹಳ್ಳಿ ಶಿವರಾಜು, ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಅಭಿನಂದಿಸಿದ್ದಾರೆ.
15 ಸಿ.ಆರ್.ಲಿಖಿತ್ಗೌಡ-2
ಕೆ.ಆರ್.ನಗರದ ಬ್ರೈಟ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಿ.ಆರ್.ಲಿಖಿತ್ಗೌಡನ ಸಾಧನೆಯನ್ನು ಕಾಲೇಜಿನ ಉಪನ್ಯಾಸಕರು ಅಭಿನಂದಿಸಿದರು.