*ಎಸ್. ಮಹದೇವಯ್ಯ ಅಭಿಪ್ರಾಯ
ಪ್ರತಿನಿಧಿ ವರದಿ ಹುಲ್ಲಹಳ್ಳಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು 10 ವರ್ಷಗಳ ಕಾಲ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಉತ್ತಮ ಆಡಳಿತ ನೀಡಿದ್ದಾರೆ ಎಂದು ಕಾಂಪೋಸ್ಟ್ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ಹೇಳಿದರು.
ಹುಲ್ಲಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಕಣೆನೂರು, ಮೊತ್ತ, ಮಾದನಹಳ್ಳಿ, ತರಗನಹಳ್ಳಿ ಮುಂತಾದ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ .ಬಾಲರಾಜು ಪರ ಮತಯಾಚನೆ ಮಾಡಿದ ವೇಳೆ ಮಾತನಾಡಿದರು.
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ನಮ್ಮ ಪಕ್ಷದ ಅಭ್ಯರ್ಥಿಯಾದ ಎಸ್. ಬಾಲರಾಜು ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಮತ್ತೊಮ್ಮೆ ಮೋದಿಯವರ ಕೈ ಬಲಪಡಿಸಬೇಕು ಎಂದರು.
ಹುಲ್ಲಹಳ್ಳಿ ಜಿಲ್ಲಾ ಪಂಚಾಯಿ ಕ್ಷೇತ್ರ ಯಾವುದೇ ಚುನಾವಣೆ ನಡೆದರೂ ಬಿಜೆಪಿಗೆ ಹೆಚ್ಚು ಲೀಡ್ ಕೊಡುವ ಕ್ಷೇತ್ರವಾಗಿದೆ. ಆದ್ದರಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.
ಗ್ರಾಮಾಂತರ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಸಿಂಧುವಳ್ಳಿ ಕೆಂಪಣ್ಣ, ಶಿವರಾಮ್, ತಾಪಂ ಮಾಜಿ ಅಧ್ಯಕ್ಷ ಬಿ.ಎಸ್. ಮಹದೇವಪ್ಪ, ಗ್ರಾಂಪಂ ಮಾಜಿ ಅಧ್ಯಕ್ಷ ಮಹೇಶ್, ಮುಖಂಡರಾದ ಕುಂಬ್ರಹಳ್ಳಿ ಸುಬ್ಬಣ್ಣ ಸೇರಿದಂತೆ ಇತರರು ಹಾಜರಿದ್ದರು.