ಪ್ರತಿನಿಧಿ ವರದಿ ಗುಂಡ್ಲುಪೇಟೆ
ಮಾಜಿ ಶಿಕ್ಷಣ ಸಚಿವರಾಗಿದ್ದ ಎಸ್ .ಸುರೇಶ್ ಕುಮಾರ್ ಅವರು ಗುರುವಾರ ಗುಂಡ್ಲುಪೇಟೆ ಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಭೇಟಿ ನೀಡಿ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ .ಬಾಲರಾಜು ಪರ ವಕೀಲರು ಬೆಂಬಲ ಕೋರಿದರು. ದೇಶದ ಸಮಗ್ರ ಅಭಿವೃದ್ಧಿ ಹಾಗೂ ಸದೃಢ ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ನೀಡುವಂತೆ ಮನವಿ ಮಾಡಿ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಹಂಗಳ ನಂದೀಶ್, ಸೇರಿದಂತೆ ವಕೀಲರು ಇತರರು ಹಾಜರಿದ್ದರು.