ಮೈಸೂರು: ನೇಹಾ ಹಿರೀಮಠ ಹತ್ಯೆ ಪ್ರಕರಣ ಕುರಿತು ದುರಂಹಕಾರದ ಹೇಳಿಕೆಗಳನ್ನು ಯಾರೂ ಸಹಿಸಲ್ಲ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಗಂಭೀರವಾದ ಘಟನೆ ನಡೆದಿದೆ. ವೈಯಕ್ತಿಕ ವಿಚಾರಕ್ಕೆ ಕೊಲೆಯಾಗಿದೆ ಎಂದು ಸಚಿವರು ಹೇಳುತ್ತಾರೆ. ಇದು ಅಕ್ಷಮ್ಯ ಅಪರಾಧ. ಕಾಂಗ್ರೆಸ್ ಸಚಿವರು ಒಂದು ಕೋಮನ್ನು ಓಲೈಸಲು ಮುಂದಾಗಿದ್ದಾರೆ. ಪೋಷಕರು ಮಗಳನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ. ಅವರಿಗೆ ಸಾಂತ್ವನ ಹೇಳಬೇಕು. ರಾಜ್ಯದ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಬೇಕು. ಬಿಜೆಪಿ ಚುನಾವಣೆಯನ್ನು ಬದಿಗಿಟ್ಟು ಹೋರಾಟ ಮಾಡುತ್ತಿದ್ದೇವೆ. ನೇಹಾ ಪೋಷಕರೇ ಈ ಘಟನೆ ಹಿಂದೆ ಲವ್ ಜಿಹಾದ್ ಇದೇ ಅಂಥ ಹೇಳಿದ್ದಾರೆ. ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಅಂಥ ಜನರು ಮಾತನಾಡುತ್ತಿದ್ದಾರೆ. ಇದಕ್ಕೆಲ್ಲ ರಾಜ್ಯದ ಜನರು ಉತ್ತರ ಕೊಡುತ್ತಾರೆ ಎಂದು ಮೈಸೂರಿನಲ್ಲಿ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.