ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಷಣ. ಸಿದ್ದರಾಮಯ್ಯ ಅಹಿಂದ ನಾಯಕ ಅಂತ ಹೇಳಿಕೊಂಡಿದ್ದರು. ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದ ವರ್ಗಗಳನ್ನು ಮರೆತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಕಾಯಕ ಸಮಾಜಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಕೇವಲ ಅಲ್ಪಸಂಖ್ಯಾತರ ಹಿಂದೆ ಹೊರಟಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ಪರಿಣಾಮವಾಗಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನೇಹಾ ಎಂಬ ಹೆಣ್ಣು ಮಗಳ ಕೊಲೆಯಾದರೆ ವೈಯುಕ್ತಿಕ ಕಾರಣ ಅಂತ ಸಿಎಂ ಹೇಳಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗ ಎಸ್ಟಿ ಮಹಿಳೆಯನ್ನು ವಿವಸ್ತ್ರಗೊಳಿಸಲಾಯ್ತು. ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನು ಆಸ್ಪತ್ರೆಗೆ ಹೋಗಿ ಆರೋಗ್ಯ ವಿಚಾರಿಸಿದೆ. ಕಾಂಗ್ರೆಸ್ ಸರ್ಕಾರದ ಯಾವ ನಾಯಕರೂ ಭೇಟಿ ಕೊಡಲಿಲ್ಲ. ನೀವು ಮತಗಟ್ಟೆಗೆ ಹೋದಾಗ ಮೋದಿ, ಮಹಾರಾಜರನ್ನು ನೆನಪಿಸಿಕೊಳ್ಳಿ. ಪ್ರಧಾನಿ ಮೋದಿ ಅಪೇಕ್ಷೆಯಂತೆ ಯದುವೀರ್ ಅಭ್ಯರ್ಥಿ ಆಗಿದ್ದಾರೆ. ಯದುವೀರ್ ಅವರನ್ನು ಜಾತಿ ಆಧಾರದ ಮೇಲೆ ನೋಡಬೇಡಿ. ಚಾಮರಾಜನಗರದಲ್ಲಿ ಎಸ್.ಬಾಲರಾಜ್ ಅಭ್ಯರ್ಥಿ ಆಗಿದ್ದಾರೆ. ಇಬ್ಬರನ್ನೂ ದೊಡ್ಡ ಅಂತರದಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಇನ್ನು ಮುಂದುವರೆದು ಮಾತನಾಡಿದ ಅವರು, ಸಮಾವೇಶಕ್ಕೆ ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದೀರ. ರಾಜ್ಯದ 28 ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮೋದಿಯವರ ಕೈ ಬಳಪಡಿಸುವ ಸಂಕಲ್ಪ ಹೊಂದಿದ್ದೇನೆ.
ಈ ಬಾರಿಯ ಲೋಕಸಭಾ ಚುನಾವಣೆ ಜಾತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ. ದೇಶದ ಭವಿಷ್ಯ ರೂಪಿಸುವ ಚುನಾವಣೆಯಾಗಿದೆ. ಈ ಚುನಾವಣೆಯನ್ನ ನಾವೆಲ್ಲರೂ ಗಂಭೀರವಾಗಿ ಪರಿಗಣಿಸಬೇಕಿದೆ. ರೈತರು, ಬಡವರು, ಮಹಿಳೆಯರು, ಯುವಕರಿಗೆ ನಮ್ಮ ಯೋಜನೆ ತಲುಪಬೇಕೆಂದು ಮೋದಿಯವರು ಕೆಲಸ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ವಿಶ್ರಾಂತಿ ಪಡೆಯದೇ ದೇಶಕ್ಕಾಗಿ, ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ದೇಶದ ಕಟ್ಟ ಕಡೆಯ ವ್ಯಕ್ತಿಗು ಸೌಲಭ್ಯ ತಲುಪಬೇಕೆಂದು ಅಂಬೇಡ್ಕರ್ ಹೇಳಿದ್ದಾರೆ.. ಅದೇ ರೀತಿ ಮೋದಿಯವರು ಕೂಡ ಕಟ್ಟ ಕಡೆಯ ವ್ಯಕ್ತಿಗೆ ಕೇಂದ್ರ ಸರ್ಕಾರದ ಯೋಜನೆ ತಲುಪಬೇಕೆಂದು ಕೆಲಸ ಮಾಡುತ್ತಿದ್ದಾರೆ.
18 ಕ್ಕೂ ಹೆಚ್ಚು ಕಾಯಕ ಸಮಾಜಗಳಿಗೆ ವಿಶ್ವಕರ್ಮ ಯೋಜನೆ ಜಾರಿ ಮಾಡಿದ್ದಾರೆ. 2047 ಕ್ಕೆ ಭಾರತ ಅಭಿವೃದ್ಧಿ ದೇಶ ಆಗಬೇಕೆಂದರೆ ಎಲ್ಲರಿಗೂ ಸರ್ಕಾರದ ಯೋಜನೆಗಳು ತಲುಪಬೇಕು. 5 ಕೋಟಿ ಮನೆ ನಿರ್ಮಾಣಕ್ಕೆ ಸಂಕಲ್ಪ ಪತ್ರ ಬಿಡುಗಡೆ ಮಾಡಿದ್ದಾರೆ. ಪ್ರತಿಯೊಬ್ಬ ಭಾರತೀಯರು ಇಂದು ತಲೆ ಎತ್ತಿಕೊಂಡು ನಡೆಯುವ ಪರಿಸ್ಥಿತಿ ನಿರ್ಮಾಣ ಆಗಿದೆ, ಇದಕ್ಕೆ ಕಾರಣ ನರೇಂದ್ರ ಮೋದಿ. ರಾಜ್ಯದಲ್ಲಿ ಬಡವರು, ರೈತರು, ಕಾಯಕ ಸಮಾಜಗಳ ಪರ ಯಡಿಯೂರಪ್ಪ ಕೆಲಸ ಮಾಡಿದ್ರು. ಕಾಯಕ ಸಮಾಜಗಳಿಗೆ ನಿಗಮ ಮಂಡಳಿ ರೂಪಿಸಿ ಅನುದಾನ ಕೊಟ್ಟಿದ್ದು ಯಡಿಯೂರಪ್ಪನವರು ಎಂದು ಕಾಯಕ ಸಮಾಜಗಳ ಸಮಾವೇಶದಲ್ಲಿ ಬಿ ವೈ ವಿಜಯೇಂದ್ರ ಹೇಳಿದ್ದಾರೆ.