ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯ
ಗುಂಡ್ಲುಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ
ಗುಂಡ್ಲುಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಹಾಗೂ ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಸ್ ಬಾಲರಾಜು ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ನವರು ಬಹಳ ಹಗುರವಾಗಿ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುತ್ತಾರೆ. ಅದಕ್ಕೆ ಉತ್ತರವಾಗಿ ಮೋದಿಯವರು ಬೆಂಗಳೂರಿಗೆ ಬಂದಾಗ ರಾಜ್ಯದ ಜನತೆಗೆ ಎಲ್ಲವನ್ನು ತಿಳಿಸಿದ್ದಾರೆ ಕಾಂಗ್ರೆಸ್ ನವರಿಗೆ ಒಂದು ಮಾತು ಹೇಳಲು ಇಚ್ಛಿಸುತ್ತೇನೆ. ಹಣ ಬಲ, ತೋಳ್ಬಲದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಜನ ಜಾಗೃತರಾಗಿದ್ದಾರೆ . ಗ್ಯಾರಂಟಿಗಳ ಸುಳ್ಳು ಭರವಸೆಯನ್ನ ನೀಡುತ್ತಿರುವ ನೀವು ಚುನಾವಣೆಯಲ್ಲಿ 40 ರಿಂದ 50 ಸೀಟು ಗೆಲ್ಲಲು ಆಗದ ಪರಿಸ್ಥಿತಿಯಲ್ಲಿ ಇರುವಾಗ ಇಲ್ಲ ಸಲ್ಲದ ಭರವಸೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ತಮ್ಮ ಪ್ರಧಾನಿ ಅಭ್ಯರ್ಥಿ ಯಾರೆಂದು ತಿಳಿಸಲಿ ಸಮರ್ಥವಾದ ಪ್ರಧಾನ ಅಭ್ಯರ್ಥಿ ಕಾಂಗ್ರೆಸ್ ನಲ್ಲಿಯೇ ಇಲ್ಲ ಆದರೆ ಬೊಬ್ಬೆಯೊಡೆಯುತ್ತಿದ್ದಾರೆ ಎಂದರು.
ಮೋದಿ ಸರ್ಕಾರ ಏನು ಕೊಟ್ಟಿದೆ ಎಂದರೆ ನಾಡಿನ 54 ಲಕ್ಷ ಅನ್ನದಾತ ರೈತರಿಗಾಗಿ 12,230 ಕೋಟಿ ರೂ. ಕಿಸಾನ್ ಸಮ್ಮಾನ್, ಮನೆಗಳ ನಿರ್ಮಾಣ ಶುದ್ಧ ಕುಡಿಯುವ ನೀರು ನೀಡಿದೆ, ಉಚಿತ ಎಲ್ಪಿಜಿ ಅನಿಲ ವಿತರಣೆ ಮಾಡಿದ್ದಾರೆ. ಗರೀಬ್ ಕಲ್ಯಾಣ ಯೋಜನೆಯ ಮೂಲಕ ಅನ್ನ ನೀಡಿದ್ದಾರೆ. ಆದರೆ ಕಾಂಗ್ರೆಸ್ ನವರು ಮನಬಂದಂತೆ ಮಾತನಾಡುತ್ತಿದ್ದಾರೆ ಜನತೆಗೆ ಈಗ ಕೊಡುತ್ತಿರುವ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದು ರಾಜ್ಯ ಸರ್ಕಾರ ಒಂದು ಕೆಜಿ ಅಕ್ಕಿಯನ್ನು ಸಹ ನೀಡಿಲ್ಲ ಎಂದರು.
ಮೋದಿ ಪ್ರಧಾನಿಯಾಗುವುದು ಸತ್ಯ: ನನಗೆ ಈಗ 82 ವರ್ಷ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇನೆ. ಜನರು ಆಶೀರ್ವಾದ ಮಾಡಿದರೆ ಮತ್ತೊಂದು ಬಾರಿ ಚುನಾವಣೆ ಮಾಡುತ್ತೇನೆ. ಅಲ್ಲದೆ ದೇಶದ ಪ್ರಧಾನಿ ಒಂದು ದಿನವು ವಿಶ್ರಾಂತಿ ತೆಗೆದುಕೊಳ್ಳದೆ ದುಡಿಯುತ್ತಿದ್ದಾರೆ. ಅಂತಹ ವ್ಯಕ್ತಿಯನ್ನು ವಿಶ್ವವೇ ಕೊಂಡಾಡುತ್ತಿದೆ ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಅಷ್ಟೇ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಸತ್ಯ.
ಅಭ್ಯರ್ಥಿ ಗೆಲ್ಲುವಂತೆ ಮಾಡಿ: ದೇಶದಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾದ ಎಸ್. ಬಾಲರಾಜು ಅವರನ್ನು 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗುವುದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಆದಕಾರಣ ಪಕ್ಷದ ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿ ಪಕ್ಷದ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡಿದರು.
ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮಾತನಾಡಿ, ರಾಜ್ಯದಿಂದ ಯಡಿಯೂರಪ್ಪ ಅವರ ಸಂಕಲ್ಪದಂತೆ 28 ಕ್ಷೇತ್ರ ಗೆಲ್ಲಿಸುವಂತಾಗಬೇಕು. ಕಾಂಗ್ರೆಸ್ ನವರು ಇತ್ತೀಚೆಗೆ ಒಂದು ಜಾಹೀರಾತನ್ನು ನೀಡಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರದವರು ಒಂದು ಪೈಸೆ ನೀಡಿಲ್ಲ ಚೊಂಬು ನೀಡಿದ್ದಾರೆ ಎಂಬ ಜಾಹೀರಾತು. ಅದಕ್ಕೆ ಉತ್ತರವಾಗಿ ಜನತಾದಳದ ವರಿಷ್ಠರಾದ ದೇವೇಗೌಡರು ಸರಿಯಾದ ಉತ್ತರವನ್ನೇ ನೀಡಿದ್ದಾರೆ ಅದಕ್ಕಿಂತ ಸಮರ್ಥವಾದ ಉತ್ತರವನ್ನು ನೀಡಲು ಆಗುವುದಿಲ್ಲ ಎಂದರು.
ನರೇಂದ್ರ ಮೋದಿ ಅವರು ತಮ್ಮ 10 ವರ್ಷದ ಅವಧಿಯಲ್ಲಿ ದೇಶಕ್ಕೆ ಅಕ್ಷಯ ಪಾತ್ರೆಯನ್ನೇ ನೀಡಿದ್ದಾರೆ. ಅದಕ್ಕೆ ಉತ್ತರವಾಗಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮನ್ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 10,000 ಗಳು ಬರುತ್ತಿತ್ತು ರೈತರ ಮಕ್ಕಳಿಗಾಗಿ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ವಿದ್ಯಾನಿಧಿ ಯೋಜನೆ ತಂದರು ಅದು ಅಲ್ಲದೆ ಮನೆಮನೆಗೆ ಕುಡಿಯುವ ನೀರಿನ ಯೋಜನೆಯ ಜಲಜೀವನ್ ಮಿಷನ್ ಯೋಜನೆಯಲ್ಲಿ ನೀಡಲಾಗಿದೆ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದರು.
ಎರಡು ವರ್ಷದ ಕರೊನಾ ಸಂದರ್ಭದಲ್ಲಿ ವ್ಯಾಕ್ಸಿನೇಷನ್ ಕೊಡಿಸಿದರು. ಸರ್ಕಾರದ ಯೋಜನೆಗಳ ಹಣ ನೇರವಾಗಿ ಖಾತೆಗೆ ಬರುವಂತೆ ಮಾಡಿದರು, ಆದರೆ ರಾಜ್ಯ ಸರ್ಕಾರ ಎಸ್ ಸಿ ಎಸ್ ಟಿ ಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿ ಆ ವರ್ಗಕ್ಕೆ ಚೊಂಬು ನೀಡಿದ್ದೀರಿ. ಆದರೆ ಮೋದಿ ಜನರಿಗೆ ಆರೋಗ್ಯ ಸೇವೆ ನೀಡಬೇಕೆಂಬ ಉದ್ದೇಶದಿಂದ ಆಯುಷ್ಮಾನ್ ಯೋಜನೆ ಜಾರಿಗೊಳಿಸಿದ್ದಾರೆ ಅದು ಅಕ್ಷಯ ಪಾತ್ರೆ ಎಂದರು.
ಮಾಜಿ ಶಾಸಕ ಹಾಗೂ ಚಾಮರಾಜನಗರ ಬಿಜೆಪಿ ಅಧ್ಯಕ್ಷ ಸಿಎಸ್ ನಿರಂಜನ್ ಕುಮಾರ್ ಮಾತನಾಡಿ, ಮೋದಿಯವರ 10 ವರ್ಷಗಳ ಕಾಲ ಆಡಳಿತ ನಡೆಸಿ ಉತ್ತಮ ಜನ ಮನ್ನಣೆ ಪಡೆದಿದೆ ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆದರೆ ಮೋದಿ ಬಂದ ನಂತರ ದೇಶ ಅಭಿವೃದ್ಧಿ ಕಾಣುತ್ತಿದೆ ಮೂಲ ಸೌಲಭ್ಯಗಳು ಹಳ್ಳಿಗಳಿಗೂ ತಲುಪುತ್ತಿದೆ ರಾಜ್ಯದಲ್ಲಿ ಕಾಂಗ್ರೆಸ್ ಬಂದ ತಕ್ಷಣ ಬರ ಬಂದಿದೆ ಬಿಜೆಪಿ ಇದ್ದಾಗ ರಾಜ್ಯದ ಎಲ್ಲ ಕಡೆ ಮಳೆಯಾಗುತ್ತಿತ್ತು ಎಂದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರೈತ ಪರವಾಗಿ ರೈತರ ಬಜೆಟನ್ನ ಮಂಡಿಸಿದ್ದರು ಆದರೆ ರಾಜ್ಯ ಸರ್ಕಾರ ಪಾಸಾದ ಎಲ್ಲರಿಗೂ ಯುವನಿಧಿ ನಿಡುತ್ತೇವೆ ಎಂದು ಹೇಳಿ ಒಂದು ವರ್ಷಕ್ಕೆ ನಿಗದಿ ಮಾಡಿ ಚೊಂಬು ನೀಡಿದೆ. ಎಲ್ಲ ವಸ್ತುಗಳ ಬೆಲೆ ಏರಿಸಿದ್ದಾರೆ. ಆದರೆ ಮೋದಿ ದೇಶವನ್ನು ಆರ್ಥಿಕ ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ ತಾಲೂಕಿಗೆ ಕೆರೆಗಳಿಗೆ ನೀರು ತುಂಬಿಸುವಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸಹಕಾರ ನೀಡಿದರು ಎಂದರು. ಅಲ್ಲದೆ ನಮ್ಮ ಕ್ಷೇತ್ರದ ಅಭ್ಯರ್ಥಿ ಎಸ್ ಬಾಲರಾಜ್ ಅವರು ಗುಣವಂತ ಜನಸೇವೆಗಾಗಿ ಇರುವಂತಹ ವ್ಯಕ್ತಿ ಅದೇ ರೀತಿ ಗುಣವಂತನಿಗೆ ಮತ್ತೊಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ತಾಲೂಕು ಮಂಡಲ ಅಧ್ಯಕ್ಷರಾದ ಮಹದೇವ ಪ್ರಸಾದ್, ಡಾ. ಮೋಹನ್, ರಾಮಚಂದ್ರ, ಜೆಡಿಎಲ್ ಸುರೇಶ್, ಪಿ ಗಿರೀಶ್, ನಾಗಶ್ರೀ ಪ್ರತಾಪ್, ನೂರೊಂದು ಶೆಟ್ಟಿ, ಗುರುಪಾದ ಸ್ವಾಮಿ, ಶ್ರೀಕಂಠಪ್ಪ, ಪ್ರಣಯ, ಮಂಜುನಾಥ್, ಮಲ್ಲಿಕಾರ್ಜುನ ಹಾಜರಿದ್ದರು
ಫೋಟೋ ಇದೆ