ನಾಲ್ವರಿಗೆ ಗಾಯ । ತೆಂಕಹಳ್ಳಿ ಗ್ರಾಮದಲ್ಲಿ ಘಟನೆ
ಪ್ರತಿನಿಧಿ ವರದಿ ಮಳವಳ್ಳಿ
ತಾಲೂಕಿನ ತೆಂಕಹಳ್ಳಿ ಗ್ರಾಮದ ಬಳಿ ಭಾನುವಾರ ರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಬೆಂಗಳೂರು ಮೂಲದ ನಂಜುಂಡಪ್ಪ(80) ಮೃತ ವೃದ್ಧ. ಕಾರು ಚಾಲಕ ಅಶೋಕ್, ಸುರೇಶ್, ಶಾರದ, ರೇಖಾ ಗಾಯಾಳುಗಳು. ಬೆಂಗಳೂರು ಮೂಲದ ಒಟ್ಟು 7 ಜನರ ತಂಡ ಕಾರಿನಲ್ಲಿ ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ಹಾಗೂ ಸರಗೂರು ಮಹದೇಶ್ವರ ದೇವಸ್ಥಾನಗಳಲ್ಲಿ ಪೂಜೆ ಮುಗಿಸಿಕೊಂಡು ಹಿಂದಿರುಗು ವೇಳೆ ಅಪಘಾತ ಸಂಭವಿಸಿದೆ.
ವೇಗವಾಗಿ ಬರುತ್ತಿದ್ದ ಕಾರು ತೆಂಕಹಳ್ಳಿ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಮೊದಲು ವಿದ್ಯುತ್ ಕಂಬಕ್ಕೆ ನಂತರ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ. ಗಾಯಾಳುಗಳಿಗೆ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.