ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ದಕ್ಷಿಣ ಬಡಾವಣೆಯ ಶ್ರೀ ಮಹದೇಶ್ವರ ಕಲ್ಯಾಣ ಮಂಟಪದ ಎದುರಿನ ಹರಿ ಚರಣ್ ಆರ್ಕೆಡ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಬ್ಲಾಕ್ ಸೆಂಟರ್ ಹಾಗೂ ಶಾಪ್ ಮೆನ್ ಬಟ್ಟೆ ಅಂಗಡಿಗಳಿಗೆ ಬುಧವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ.
ಅಂಗಡಿಯ ಮಾಲೀಕ ತೌಫಿಕ್ ಎಂಬುವರಿಗೆ ಸೇರಿದ ಬಟ್ಟೆ ಅಂಗಡಿ ಅಗ್ನಿ ಅವಘಡಕ್ಕೀಡಾಗಿರುವುದು. ಇವರು ಮಧ್ಯಾಹ್ನ ಊಟಕ್ಕೆಂದು ತಮ್ಮ ಬಟ್ಟೆ ಅಂಗಡಿ ಬಾಗಿಲು ಬಂದ್ ಮಾಡಿ ಹೊರ ಹೋಗಿದ್ದರು. ಈ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಅಂಗಡಿ ಒಳಗೆ ಬೆಂಕಿ ಹೊತ್ತಿಕೊಂಡಿದೆ.
ಇದರಿಂದಾಗಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಬಟ್ಟೆಗಳು ಬೆಂಕಿಗಾಹತೆಯಾಗಿದ್ದು, ಮುಚ್ಚಿದ್ದ ಬಟ್ಟೆ ಅಂಗಡಿಯ ಬಾಗಿಲು ಶಟರ್ ಸಂದಿಯಿಂದ ಇದ್ದಕ್ಕಿದ್ದಂತೆ ಬೆಂಕಿ ಜ್ವಾಲೆ ಹಾಗೂ ಹೊಗೆ ಹೊರ ಬರುವುದನ್ನು ಕೆಳಗಡೆ ಅಂಗಡಿಯಲ್ಲಿ ಟೀ ಕುಡಿಯಲು ಬಂದಿದ್ದ ಯುವಕನೊರ್ವ ನೋಡಿದ್ದಾರೆ. ಬಳಿಕ ಇದನ್ನು ಗಮನಿಸಿದ ಪಕ್ಕದ ಅಂಗಡಿಯವರು ತಕ್ಷಣ ಅಗ್ನಿಶಾಮಕ ಠಾಣೆಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರು.
ಕೂಡಲೇ ಸ್ಥಳ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತವನ್ನು ತಪ್ಪಿಸಿದರು. ಈ ವೇಳೆಗೆ ಅಂಗಡಿಯಲ್ಲಿದ್ದ ಲಕ್ಷಾಂತರ ಬೆಲೆ ಬಾಳುವ ಬಟ್ಟೆ ಹಾಗೂ ಇತರ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಪಟ್ಟಣದ ವಿವಿದ ಬಡಾವಣೆಯ ಜನರು ಅಂಗಡಿ ಸುತ್ತಲೂ ದಿಡೀರ್ ಜಮಾಯಿಸಿ ಅಗ್ನಿಶಾಮಕ ಠಾಣಾ ಸಿಬ್ಬಂದಿ ಕಾರ್ಯಾಚರಣೆಯನ್ನು ಭಾರಿ ಕುತೂಹಲದಿಂದ ವೀಕ್ಷಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
24ಕೆಜಿಎಲ್-1
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಕಲ್ಯಾಣ ಮಂಟಪದ ಎದುರಿನಲ್ಲಿರುವ ಬ್ಲಾಕ್ ಸೆಂಟರ್ ಹಾಗೂ ಶಾಪ್ ಮೆನ್ ಬಟ್ಟೆ ಅಂಗಡಿ ಬೆಂಕಿಯಿAದ ಹೊತ್ತಿ ಉರಿಯುತ್ತಿರುವುದನ್ನು ಅಗ್ನಿ ಶಾಮಕ ಠಾಣಾ ಸಿಬ್ಬಂದಿಗಳು ನಿಯಂತ್ರಿಸಿದರು.