ಪ್ರತಿನಿಧಿ ವರದಿ ಕೊಳ್ಳೇಗಾಲ
ತಾಲೂಕಿನ ಬಹುತೇಕ ಮತಗಟ್ಟೆ ಕೇಂದ್ರಗಳಲ್ಲಿ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಸಾರ್ವತ್ರಿಕ ಚುನಾವಣೆ ಅಂಗವಾಗಿ ಶುಕ್ರವಾರ ಬೆಳಗ್ಗಿನಿಂದಲೇ ಬಿರುಸುಕೊಂಡು ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದ್ದು, ಹರ್ಷ ಚಿತ್ತದಿಂದ ಮತದಾರರು ಮತಗಟ್ಟೆ ಕೇಂದ್ರಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು.
ಪಟ್ಟಣದ ದೇವಾಂಗಪೇಟೆ, ಟೌನ್ ಸರ್ಕಾರಿ ಶಾಲೆ, ಪೀಸ್ ಪಾರ್ಕ್ ರಸ್ತೆ, ಭೀಮನಗರ ಬಡಾವಣೆ, ಮಠದಬೀದಿ, ನಾಯಕರ ದೊಡ್ಡಬೀದಿ, ಎಂಸಿಕೆಸಿ ಶಾಲೆ, ಗೀತಾ ಪ್ರೈಮರಿ ಶಾಲೆ, ಬಿಎಂಎಚ್ಪಿ ಶಾಲೆ, ಎಪಿಎಂಸಿ, ಲಯನ್ಸ್ ಶಾಲೆ, ಲಿಂಗಣಾಪುರ, ಬಸ್ತಿಪುರ, ಶಂಕನಪುರ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ ವಿವಿದ ಮತಗಟ್ಟೆಗಳಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಚುರುಕುಗೊಂಡು ಸಂಜೆ 6 ಗಂಟೆವರೆಗೂ ನಡೆಯಿತು.
ಅಂತೆಯೇ, ಪಟ್ಟಣದ ಐಇಎಲ್ಸಿ ಶಾಲೆಯಲ್ಲಿ ತೆರೆದಿದ್ದ 121ನೇ ಮತಗಟ್ಟೆಗೆ ಬೆಳಗ್ಗೆ ತೆರಳಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.ತಮ್ಮ ಪಕ್ಷದ ಅಭ್ಯರ್ಥಿಯ ಗೆಕುವಿನ ವಿಶ್ವಾಸ ವ್ಯಕ್ತಪಡಿಸಿದರು.
ಹಕ್ಕು ಚಲಾಯಿಸಿದ ಆರ್.ನರೇಂದ್ರ:
ಹನೂರು ಕ್ಷೇತ್ರದ ಮಾಜಿ ಶಾಸಕ ಆರ್.ನರೇಂದ್ರ ಅವರು ಶುಕ್ರವಾರ ತಮ್ಮ ಸ್ವಗ್ರಾಮವಾದ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಮತಗಟ್ಟೆ ಸಂಖ್ಯೆ 40ರಲ್ಲಿ ಕುಟುಂಬ ಸಮೇತ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಪತ್ನಿ ಆಶಾ, ಪುತ್ರಿಯರಾದ ಅಮೀತಾ, ನಿಖಿತಾ, ಪುತ್ರ ನವನೀತ್ ಗೌಡ ಅವರೊಟ್ಟಿಗೆ ಮತಗಟ್ಟೆ ಕೇಂದ್ರಕ್ಕೆ ತೆರಳಿದ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಪ್ರಕ್ರಿಯೆಯಲ್ಲಿ ತೊಡಗಿದ ಆರ್.ನರೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೊಸ್ ಅವರು ಭಾರಿ ಅಂತರದಿಂದ ಗೆದ್ದು ಸಂಸದರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತ ಚಲಾಯಿಸಿದ ಕೆಪಿಸಿಸಿ ಉಪಾಧ್ಯಕ್ಷ ಜಿಎನ್ಎನ್:
ಪಟ್ಟಣದ ಎಪಿಎಂಸಿ ಮತಗಟ್ಟೆ ಸಂಖ್ಯೆ 130ಕ್ಕೆ ಬೆಳಗ್ಗೆ ತೆರಳಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಜಿ.ಎನ್.ನಂಜುಂಡಸ್ವಾಮಿ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಬೆಂಬಲಿಗರ ಜತೆಗೂಡಿ ಕೆಲ ನಿಮಿಷ ಮತಗಟ್ಟೆ ಕೇಂದ್ರಕ್ಕೆ ತೆರಳುತ್ತಿದ್ದ ಮತದಾರರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಅಂತಿಮ ಮತಯಾಚನೆ ಕಸರತ್ತು ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಗೆಲುವು ಖಚಿತ ಎಂದಲ್ಲದೆ, ರಾಜ್ಯದಲ್ಲಿ ಬಿಜೆಪಿ ವಿರುದ್ಧ ಬದಲಾವಣೆ ಪರ್ವ ಆರಂಭವಾಗಿದ್ದು, ಕೇಂದ್ರದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
ಹಕ್ಕು ಚಲಾಯಿಸಿದ ಮಹಾನಂದ:
ಪಟ್ಟಣದ ವಿಶ್ವ ಚೇತನ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಅವರು ಶುಕ್ರವಾರ ಮಧ್ಯಾಹ್ನ ಲಯನ್ಸ್ ಶಾಲಾ ಆವರಣದಲ್ಲಿ ತೆರೆದಿದ್ದ ಮತಗಟ್ಟೆ ಕೇಂದ್ರಕ್ಕೆ ಕುಟುಂಬ ಸಮೇತ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಇದೇ ವೇಳೆ ಪ್ರೇಮಲತಾ ಕೃಷ್ಣಸ್ವಾಮಿ ಅವರ ಪುತ್ರ ಬೆಂಗಳೂರಿನ ಡಿವೈಎಸ್ಪಿ ಎಚ್.ಕೆ.ಮಹಾನಂದ್ ಹಾಗೂ ಸೊಸೆ ದಿವ್ಯ ಮಹಾನಂದ ಇದ್ದರು.
26ಕೆಜಿಎಲ್-1
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದ ಐಇಎಲ್ಸಿ ಮತಗಟ್ಟೆಯಲ್ಲಿ ಶುಕ್ರವಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ತಮ್ಮ ಹಕ್ಕು ಚಲಾಯಿಸಿದರು.
26ಕೆಜಿಎಲ್-1.ಎ
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಮತಗಟ್ಟೆಯಲ್ಲಿ ಶುಕ್ರವಾರ ಬೆಳಗ್ಗೆ ಹನೂರು ಕ್ಷೇತ್ರದ ಮಾಜಿ ಶಾಸಕರಾದ ಆರ್.ನರೇಂದ್ರ ಕುಟುಂಬ ಸಮೇತ ತೆರಳಿ ತಮ್ಮ ಹಕ್ಕು ಚಲಾಯಿಸಿದರು.
26ಕೆಜಿಎಲ್-3.ಬಿ
ಕೊಳ್ಳೇಗಾಲದ ಎಪಿಎಂಸಿ ಮತಗಟ್ಟೆ ಕೇಂದ್ರದಲ್ಲಿ ಶುಕ್ರವಾರ ಕೆಪಿಸಿಸಿ ಉಪಾಧ್ಯಕ್ಷ ಜಿ.ಎನ್.ನಂಜುAಡಸ್ವಾಮಿ ಅವರು ತಮ್ಮ ಹಕ್ಕು ಚಲಾಯಿಸಿದರು.
26ಕೆಜಿಎಲ್-1.ಸಿ
ಫೋಟೋ ಶೀರ್ಷಿಕೆ:
ಕೊಳ್ಳೇಗಾಲದ ಲಯನ್ಸ್ ಶಾಲಾ ಮತಗಟ್ಟೆ ಕೇಂದ್ರದಲ್ಲಿ ಶುಕ್ರವಾರ ವಿಶ್ವಚೇತನ ವಿದ್ಯಾಸಂಸ್ಥೆ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಅವರು ಮತದಾನ ಮಾಡಿದರು.