ಹಾಸನ: ರಾಜ್ಯ ರಾಜಕಾರಣದಲ್ಲಿ ಬಾರಿ ಸದ್ದು ಮಾಡುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ವಿಚಾರ ರಾಜ್ಯ ಸೇರಿದಂತೆ ದೇಶದಲ್ಲಿ ಬಾರಿ ಚರ್ಚೆ ಆಗುತ್ತಿದೆ. ಪೆನ್ ಡ್ರೈವ್, ಕಿಡ್ಯಾಪ್ ಪ್ರಕರಣ ಪ್ರಜ್ವಲ್ ಹಾಗೂ ರೇವಣ್ಣರಿಗೆ ಸಂಕಷ್ಟ ತಂದೊಡ್ಡಿದೆ. ವಿರೋಧ ಪಕ್ಷಗಳ ಬಾರಿ ಟೀಕೆಗೂ ಕೂಡ ವೇದಿಕೆಯಾಗಿದೆ. ಇದೇ ಪ್ರಕರಣ ಸಂಬಂಧ ಇದೀಗ ದೇವೇಗೌಡರ ಕುಟುಂಬದ ವಿರುದ್ದ, ಒಂದು ಕಾಲದಲ್ಲಿ ದೇವೇಗೌಡ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮಂಡ್ಯದ ಬಿಜೆಪಿ ಮುಖಂಡ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.
ಪ್ರಜ್ವಲ್ ರೇವಣ್ಣ ಮುಂದೆ ಉಮೇಶ್ ರೆಡ್ಡಿ ಕೂಡ ಕಡಿಮೆ. ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟೊಂದು ವಿಡಿಯೋಗಳು ಇರುವುದಿಲ್ಲ. ಎಂಪಿಯಾಗಿ ಐದು ವರ್ಷ ಏನನ್ನು ಮಾಡಿಲ್ಲ. ದಿನಕ್ಕೆ ಮೂವರಂತೆ ಐದು ವರ್ಷ ಇದನ್ನೇ ಮಾಡಿದ್ದಾನೆ. ನಮ್ಮಂತವರನ್ನು ತುಳಿದ ಪಾಪದಿಂದ ದೇವೇಗೌಡರಿಗೆ ಇಂತಹ ಪರಿಸ್ಥಿತಿ ಬಂದಿದೆ. ಕುಮಾರಸ್ವಾಮಿ ಅವರು ಸಂತ್ರಸ್ಥೆಯರ ಪರವಾಗಿ ಹೋರಾಟ ಮಾಡಬೇಕು. ಅಲ್ಲದೇ ಕೂಡಲೇ ಎನ್ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನ ಹೊರಹಾಕಬೇಕು ಎಂದು ಕಿಡಿಕಾರಿದರು.