ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಿನ್ನೆ ಎರಡು ಕೊಲೆಗೆ ಸಾಕ್ಷಿಯಾಗಿದೆ. ಒಂದು ಕಡೆ ಮಾಜಿ ರೌಡಿಶೀಟರ್ ನನ್ನ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ್ರೆ, ಮತ್ತೊಂದೆಡೆ ಗಂಡ ಬಿಟ್ಟು ಬಾಯ್ ಫ್ರೆಂಡ್ ಜೊತೆಗೆ ಬಣ್ಣದ ನಗರಿಗೆ ಬಂದು ಬದುಕು ಕಟ್ಟಿಕೊಂಡ ಮಹಿಳೆ ಪ್ರಿಯಕರನ ಕೈನಿಂದಲೇ ಹೆಣವಾಗಿ ಹೋಗಿದ್ದಾಳೆ.
ವಿದ್ಯಾ ಎಂಬ 30 ವರ್ಷದ ಮಹಿಳೆ ರಾಮನಗರ ಜಿಲ್ಲೆಯ ಮಾಗಡಿ ಸಮೀಪದ ಹೊಸದೊಡ್ಡಿ ನಿವಾಸಿ. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ 4 ವರ್ಷದ ಹಿಂದೆ ಗಂಡ ಬಿಟ್ಟು ತನ್ನದೇ ಊರಿನ ಶಾಂತಕುಮಾರ್ ಎಂಬುವವರ ಜೊತೆಗೆ ಪ್ರೀತಿ ಹುಟ್ಟಿ ಬೆಂಗಳೂರಿಗೆ ಬಂದು ಕಾಮಾಕ್ಷಿಪಾಳ್ಯದಲ್ಲಿ ನೆಲೆಸಿದ್ದಳು. ಕೆಲ ದಿನಗಳಿಂದ ಇಬ್ಬರ ಮಧ್ಯೆ ಮನಸ್ತಾಪವೂ ಉಂಟಾಗಿತ್ತು. ಹೀಗಾಗಿ ವಿದ್ಯಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡ್ತಾ ಪ್ರತ್ಯೇಕವಾಗಿ ಮನೆ ಮಾಡಿಕೊಂಡು ಸುಂಕದಕಟ್ಟೆಯ ಸೊಲ್ಲಾಪುರಂ ಲೇಔಟ್ನಲ್ಲಿ ವಾಸವಿದ್ಳು. ಇದು ಅದ್ಯಾಕೊ ಶಾಂತಕುಮಾರ್ ಗೆ ಈಕೆ ಮತ್ತೊಬ್ಬನ ಜೊತೆಗೆ ಸಲುಗೆ ಬೆಳೆಸಿಕೊಂಡಿದ್ದಾಳೆ ಅನ್ನೋ ಅನುಮಾನ ಮೂಡಿತ್ತು. ಹಾಗಾಗಿ ವಿದ್ಯಾಳನ್ನು ಭೇಟಿಯಾಗಿ ರಾತ್ರಿ 9.30 ಕ್ಕೆ ವಿದ್ಯಾ ಹಾಗೂ ಶಾಂತಕುಮಾರ್ ಇಬ್ಬರೂ ಬಾಡಿಗೆ ಮನೆಗೆ ಬಂದಿದ್ದು ಶಾಂತಕುಮಾರ್ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿ ಆಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರೊ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.