ಚಿಕ್ಕಮಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡೂ ಹಂತದ ಮತದಾನ ಮುಗಿದರೂ ಈಗ್ಯಾರು ಹೆಲಿಕಾಪ್ಟರ್ ನಲ್ಲಿ ಪ್ರಚಾರಕ್ಕೆ ಬರುತ್ತಿದ್ದಾರೆ ಎಂದು ನೀವು ಅಂದುಕೊಳ್ಳುತ್ತಿರಬಹುದು. ಈ ಚಾಪರ್ ಚುನಾವಣಾ ಪ್ರಚಾರಕ್ಕೆಬಳಕೆಯಾಗುತ್ತಿಲ್ಲ. ರಾಜ್ಯದ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಇಂದು ಬೆಂಗಳೂರು ನಗರದಿಂದ ಚಿಕ್ಕಮಗಳೂರಿಗೆ ಆಗಮಿಸಿದ್ದು ಹೀಗೆ-ಹೆಲಿಕಾಪ್ಟರ್ ನಲ್ಲಿ. ಒಂದೆರಡು ದಿನಗಳ ಮಟ್ಟಿಗೆ ಅವರು ಸಂಚಾರಕ್ಕೆ ವಾಯುಮಾರ್ಗವನ್ನೇ ಆಯ್ದುಕೊಳ್ಳಲಿದ್ದಾರಂತೆ. ಯಾಕೆ ಅಂತ ನಿಮಗೂ ಗೊತ್ತು. ಪ್ರಜ್ವಲ್ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಆಡಿಯೋ ಕ್ಲಿಪ್ಪೊಂದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಾದಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾಗಿ, ಶಿವಕುಮಾರ್ ರಸ್ತೆಯ ಬದಲು ಚಾಪರ್ ನಲ್ಲಿ ಸಂಚರಿಸುವುದು ಸೇಫ್ ಅಂದುಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಐಡಿಎಸ್ ಜಿ ಕಾಲೇಜಿನ ಆವರಣದಲ್ಲಿ ಉಪ ಮುಖ್ಯಮಂತ್ರಿಯನ್ನು ಹೊತ್ತ ಚಾಪರ್ ಲ್ಯಾಂಡ್ ಆಗುವುದನ್ನು ದೃಶ್ಯಗಳಲ್ಲಿ ನೋಡಬಹುದು.