ರಾಮನಗರ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆ-02 ಗೆ ಅನುಕೂಲವಾಗುವಂತೆ ಆಯಾಯ ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ರಾಮನಗರ ಜಿಲ್ಲಾ ಉಪ ನಿರ್ದೇಶಕರು ತಿಳಿಸಿದ್ದಾರೆ.
ವಿಶೇಷ ತರಗತಿಗಳು ಮೇ 1ರಿಂದ ಆರಂಭವಾಗಿದ್ದು, ಜೂನ್ 6ರವರೆಗೆ ನಡೆಯಲಿವೆ. ಪ್ರತಿದಿನ ಎಲ್ಲಾ ವಿಷಯಗಳ ವೇಳಾಪಟ್ಟಿ ತಯಾರಿಸಿಕೊಂಡು ಆಯಾಯ ಶಾಲೆಯ ಶಿಕ್ಷಕರೇ ಕಡ್ಡಾಯವಾಗಿ ತರಗತಿಗಳನ್ನು ಮಾಡಬೇಕು ಎಂದು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ-02 ಜೂನ್ 7ರಿಂದ ಆರಂಭವಾಗಿ 14ಕ್ಕೆ ಮುಗಿಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆ-01ರಲ್ಲಿ ಅನುತ್ತೀರ್ಣರಾಗಿರುವ ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಹೆಸರನ್ನು ಮೇ 16 ರೊಳಗಾಗಿ ಆಯಾಯ ಶಾಲೆಗಳಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.