ಚಿಕ್ಕಬಳ್ಳಾಪುರ: ಜಿಲ್ಲಾ ವಿಭಾಗ ವ್ಯಾಪ್ತಿಯ ಚಿಕ್ಕಬಳ್ಳಾಪುರ ನಗರ, ಗ್ರಾಮೀಣ, ಗೌರಿಬಿದನೂರು, ಗುಡಿಬಂಡೆ ಮತ್ತು ಬಾಗೇಪಲ್ಲಿ ಬೆ.ವಿ.ಕಂ ಉಪವಿಭಾಗ ಕಚೇರಿಗಳಲ್ಲಿ ಕಾರ್ಯ ನಿರ್ವಾಹಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ಮೇ 18ರಂದು ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ.
ಆಯಾ ವಿಭಾಗ ವ್ಯಾಪ್ತಿಗೆ ಒಳಪಡುವ ಗ್ರಾಹಕರು ಸಭೆಗೆ ಹಾಜರಾಗಿ ವಿದ್ಯುತ್ ಸರಬರಾಜಿಗೆ ಸಂಬಂಧಪಟ್ಟಂತೆ ಕುಂದುಕೊರತೆಗಳು ಇದ್ದಲ್ಲಿ ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳಬಹುದೆಂದು ಚಿಕ್ಕಬಳ್ಳಾಪುರ ಬೆವಿಕಂ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಆನಂದ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.