ಮಡಿಕೇರಿ: ಸುವರ್ಣ ನ್ಯೂಸ್ ವಾಹಿನಿಯಲ್ಲಿ ಧರ್ಮಾಧಾರಿತ ಜನಸಂಖ್ಯಾ ವರದಿ ಚರ್ಚೆಯಲ್ಲಿ ಪಾಕಿಸ್ತಾದ ಧ್ವಜವನ್ನು ಬಳಸಿರುವ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ.
ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಪಿ.ಎ.ಹನೀಫ್ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರಿಗೆ ಮನವಿ ಸಲ್ಲಿಸಿ, ಕಾರ್ಯಕ್ರಮ ನಿರೂಪಿಸಿದ ಅಜಿತ್ ಹನುಮಕ್ಕನವರ್ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.
ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸಯ್ಯದ್ ಭಾವ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್, ಡಿಸಿಸಿ ಪ್ರಮುಖ ಮೂಸಾ, ಮಜೀದ್, ಪದಾಧಿಕಾರಿಗಳಾದ ಬಶೀರ್, ಮೊಹಮ್ಮದ್ ಆಲಿ ಮೊದಲಾದವರು ಉಪಸ್ಥಿತರಿದ್ದರು.
ಫೋಟೋ 19 ಎಡಿಕೆ 01 ; ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರಿಗೆ ದೂರು ನೀಡಲಾಯಿತು.